ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್.

ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ. ಯಾರಿಗೂ ಗಂಭೀರ ಸ್ವರೂಪದ ರೋಗ ಲಕ್ಷಣ ಕಂಡುಬಂದಿಲ್ಲ. ಮುಂದಿನ ಮೂರು, ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆತಂಕದ ವಾತಾವರಣ ಇಲ್ಲ, ಮೊದಲ ಮತ್ತು ಎರಡನೇ ಹಂತದ ಕೋವಿಡ್ ಪರಿಸ್ಥಿತಿ ಈಗಿಲ್ಲ ಎಂದು ಹೇಳಿದ್ದಾರೆ.

 

ಲಭ್ಯವಿರುವ ಟೆಸ್ಟಿಂಗ್ ಕಿಟ್ಸ್ಗಳು:


RAT = 2500
RNA extraction kits =130000
VTM= 200000
RTPCR kits = 5000 Procuring

#Bengaluru #Covid #DineshGunduRao #Health #Minister #HealthMinister #government #dangerous #Covid19 #pregnantwomen #pregnant #women #hospitals #Bengaluru #karnataka #mysore #goodnewskannada #symptoms #serious

ಶಾಲಾ, ಕಾಲೇಜುಗಳು ಆರಂಭವಾಗುತ್ತಿದ್ದು, ಯಾವ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಿ ತೀರ್ಮಾನಿಸುತ್ತೇವೆ. ಸದ್ಯ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ಟೆಸ್ಟಿಂಗ್ಗೆ ಸೂಚನೆ ನೀಡಲಾಗಿದೆ. ಟೆಸ್ಟಿಂಗ್ ಕಿಟ್ಗಳು ಎರಡು ದಿನದೊಳಗೆ ಪೂರೈಕೆಯಾಗಲಿದೆ. ಸಾರಿ, ಐಎಲ್ಐ ಪ್ರಕರಣಗಳು, ವಯೋವೃದ್ಧರು, ಗರ್ಭಿಣಿಯರಿಗೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.


ಸೋಂಕಿನಿಂದ ನಿನ್ನೆ ಒಬ್ಬರು ಮೃತಪಟ್ಟಿರುವುದು ದೃಢವಾಗಿದೆ. ಅವರಿಗೆ 84 ವರ್ಷ ಆಗಿತ್ತು. ಒಂದು ವರ್ಷದಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ನಾನಾ ಆರೋಗ್ಯ ಸಮಸ್ಯೆ ಇತ್ತು. ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಆಡಿಟ್ ನಡೆಸಲು ತಿಳಿಸಲಾಗಿದೆ ಎಂದರು.ಅಗತ್ಯ ಟೆಸ್ಟಿಂಗ್ ಕಿಟ್ ಲಭ್ಯವಿದೆ: ರಾಜ್ಯದಲ್ಲಿ ಅಗತ್ಯ ಕೋವಿಡ್-19 ಟೆಸ್ಟಿಂಗ್ ಕಿಟ್ಗಳ ಲಭ್ಯತೆಯಿದೆ. SARI ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.


ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ಗಳನ್ನು ಖರೀದಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!