CSK ಮುಂದೆ RCB ಸಾಮಾನ್ಯ ತಂಡ ಎಂದು ಹೇಳಿ ಪಜೀತಿಗೆ ಸಿಲುಕಿಕೊಂಡ ಅಂಬಾಟಿ ರಾಯುಡು….

ಹೌದು ವೀಕ್ಷಕರೇ, ಸಿ ಎಸ್ ಕೆ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು, ಸಿಎಸ್‌ಕೆ ತಂಡವನ್ನು ಉತ್ತುಂಗಕ್ಕೇರಿಸುವ ಭರದಲ್ಲಿ ಆರ್‌ಸಿಬಿ ತಂಡವನ್ನು ಸಾಮಾನ್ಯ ಎಂದು ಹೇಳಿದ್ದಕ್ಕೆ, ಆರ್‌ಸಿಬಿ ಅಭಿಮಾನಿಗಳು.ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಂದಹಾಗೆ ಈ ರೀತಿಯಾಗಿ ಪಜಿತಿಗೆ ಸಿಲುಕಿರುವುದು ಹಾಗೂ ಆರ್‌ಸಿಬಿ ವಿರುದ್ಧ ಬೇಡದ ಹೇಳಿಕೆ ನೀಡುತ್ತಿರುವುದು ಇದು ಮೊದಲೆನಲ್ಲ.ಅಂದಹಾಗೆ, ಈ ಬಜೀತಿಗೆ ಕಾರಣವೇನೆಂದರೆ, 2025ರ ಐಪಿಎಲ್ ಸೀಸನ್ 18ರ 52ನೇ ಪಂದ್ಯಾವಳಿಯು ಆರ್‌ಸಿಬಿ ಹಾಗೂ ಸಿಎಸ್ಕೆ ತಂಡಗಳ ನಡುವೆ ನಡೆಯುತ್ತಿದ್ದು,ಈ ಪಂದ್ಯಕ್ಕೂ ಮುನ್ನ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಯೇ ಇದಕ್ಕೆಲ್ಲ ಕಾರಣವಾಗಿದೆ.

ಚಾನೆಲ್ ಚರ್ಚೆಯೊಂದರಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಯಾವುದೇ ಪೈಪೋಟಿಯಿಲ್ಲ. ಉಭಯ ತಂಡಗಳಿಂದ ಜಿದ್ದಾಜಿದ್ದಿನ ಕದನ ನಿರೀಕ್ಷೆಯನ್ನು ಸಹ ಮಾಡುವಂತಿಲ್ಲ. ಇಲ್ಲಿ ಆರ್ಸಿಬಿ ತಂಡವನ್ನು ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿಯಾಗಿ ಬಿಂಬಿಸಲಾಗಿದೆ. ಆದರೆ ಅಂತಹದ್ದೇನು ಇಲ್ಲ. ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿಯೇ ಇಲ್ಲ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಲವು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಗ್ಗು ಬಡಿದಿದೆ. ಅಲ್ಲದೆ ಆರ್ಸಿಬಿ ವಿರುದ್ಧ ಸಿಎಸ್ಕೆ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಆರ್ಸಿಬಿ, ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿ ಎಂದು ನಾನಂತು ಭಾವಿಸುವುದಿಲ್ಲ.ನೀವು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದರಲ್ಲಿ ಅರ್ಥವಿದೆ. ಏಕೆಂದರೆ ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿ ಇದೆ. ಆದರೆ ಸಿಎಸ್ಕೆ ಮುಂದೆ ಆರ್ಸಿಬಿ ಸಾಮಾನ್ಯ ತಂಡ. ಹೀಗಾಗಿ ಉಭಯ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದು ಸರಿಯಲ್ಲ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಆರ್ಸಿಬಿ ತಂಡವನ್ನು ಹೀಯಾಳಿಸಿ ಮಾತನಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ಆರ್ಸಿಬಿ ಹಾಗೂ ಅಭಿಮಾನಿಗಳನ್ನು ಗುರಿಯಾಗಿಸಿ ಹೇಳಿಕೆಗಳನ್ನು ನೀಡಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಆರ್ಸಿಬಿ ಪ್ಲೇಆಫ್ ಹಂತಕ್ಕೇರುವ ಸನಿಹದಲ್ಲಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್ಸಿಬಿ ಪ್ಲೇಆಫ್ಗೇರಲಿದೆಯಾ ಕಾದು ನೋಡಬೇಕಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!