CSK ಮುಂದೆ RCB ಸಾಮಾನ್ಯ ತಂಡ ಎಂದು ಹೇಳಿ ಪಜೀತಿಗೆ ಸಿಲುಕಿಕೊಂಡ ಅಂಬಾಟಿ ರಾಯುಡು….

ಹೌದು ವೀಕ್ಷಕರೇ, ಸಿ ಎಸ್ ಕೆ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು, ಸಿಎಸ್‌ಕೆ ತಂಡವನ್ನು ಉತ್ತುಂಗಕ್ಕೇರಿಸುವ ಭರದಲ್ಲಿ ಆರ್‌ಸಿಬಿ ತಂಡವನ್ನು ಸಾಮಾನ್ಯ ಎಂದು ಹೇಳಿದ್ದಕ್ಕೆ, ಆರ್‌ಸಿಬಿ ಅಭಿಮಾನಿಗಳು.ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಂದಹಾಗೆ ಈ ರೀತಿಯಾಗಿ ಪಜಿತಿಗೆ ಸಿಲುಕಿರುವುದು ಹಾಗೂ ಆರ್‌ಸಿಬಿ ವಿರುದ್ಧ ಬೇಡದ ಹೇಳಿಕೆ ನೀಡುತ್ತಿರುವುದು ಇದು ಮೊದಲೆನಲ್ಲ.ಅಂದಹಾಗೆ, ಈ ಬಜೀತಿಗೆ ಕಾರಣವೇನೆಂದರೆ, 2025ರ ಐಪಿಎಲ್ ಸೀಸನ್ 18ರ 52ನೇ ಪಂದ್ಯಾವಳಿಯು ಆರ್‌ಸಿಬಿ ಹಾಗೂ ಸಿಎಸ್ಕೆ ತಂಡಗಳ ನಡುವೆ ನಡೆಯುತ್ತಿದ್ದು,ಈ ಪಂದ್ಯಕ್ಕೂ ಮುನ್ನ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಯೇ ಇದಕ್ಕೆಲ್ಲ ಕಾರಣವಾಗಿದೆ.

ಚಾನೆಲ್ ಚರ್ಚೆಯೊಂದರಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಯಾವುದೇ ಪೈಪೋಟಿಯಿಲ್ಲ. ಉಭಯ ತಂಡಗಳಿಂದ ಜಿದ್ದಾಜಿದ್ದಿನ ಕದನ ನಿರೀಕ್ಷೆಯನ್ನು ಸಹ ಮಾಡುವಂತಿಲ್ಲ. ಇಲ್ಲಿ ಆರ್ಸಿಬಿ ತಂಡವನ್ನು ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿಯಾಗಿ ಬಿಂಬಿಸಲಾಗಿದೆ. ಆದರೆ ಅಂತಹದ್ದೇನು ಇಲ್ಲ. ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿಯೇ ಇಲ್ಲ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಲವು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಗ್ಗು ಬಡಿದಿದೆ. ಅಲ್ಲದೆ ಆರ್ಸಿಬಿ ವಿರುದ್ಧ ಸಿಎಸ್ಕೆ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಆರ್ಸಿಬಿ, ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿ ಎಂದು ನಾನಂತು ಭಾವಿಸುವುದಿಲ್ಲ.ನೀವು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದರಲ್ಲಿ ಅರ್ಥವಿದೆ. ಏಕೆಂದರೆ ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿ ಇದೆ. ಆದರೆ ಸಿಎಸ್ಕೆ ಮುಂದೆ ಆರ್ಸಿಬಿ ಸಾಮಾನ್ಯ ತಂಡ. ಹೀಗಾಗಿ ಉಭಯ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದು ಸರಿಯಲ್ಲ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಆರ್ಸಿಬಿ ತಂಡವನ್ನು ಹೀಯಾಳಿಸಿ ಮಾತನಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ಆರ್ಸಿಬಿ ಹಾಗೂ ಅಭಿಮಾನಿಗಳನ್ನು ಗುರಿಯಾಗಿಸಿ ಹೇಳಿಕೆಗಳನ್ನು ನೀಡಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಆರ್ಸಿಬಿ ಪ್ಲೇಆಫ್ ಹಂತಕ್ಕೇರುವ ಸನಿಹದಲ್ಲಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್ಸಿಬಿ ಪ್ಲೇಆಫ್ಗೇರಲಿದೆಯಾ ಕಾದು ನೋಡಬೇಕಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!