ಕರೆಂಟ್ ಟವರ್ ಏರಿ ಹೈಡ್ರಾಮಾ: ಪತ್ನಿಯ ತಂಗಿ ಜೊತೆ ಮದುವೆ ಮಾಡಲು ಒತ್ತಾಯಿಸಿದ ವ್ಯಕ್ತಿ.

ಕನೌಜ್:ವಿಚಿತ್ರ ಘಟನೆ ಕನೌಜ್‌ನಿಂದ ವರದಿಯಾಗಿದೆ, ರಾಜ್ ಸಕ್ಸೇನಾ ಎಂಬ ವ್ಯಕ್ತಿ ಕರೆಂಟ್ ಟವರ್ ಏರಿ ಆತ್ಮಹತ್ಯೆಗೆ ಬೆದರಿಕೆ ಹಾಕಿದ್ದಾನೆ. ಕಾರಣ – ಪತ್ನಿಯ ಇನ್ನೊಬ್ಬ ತಂಗಿಯನ್ನು ಮದುವೆ ಮಾಡಿಕೊಳ್ಳಬೇಕು ಎಂಬ ಅವನ ಬೇಡಿಕೆ.

ಘಟನೆ ಹೀಗಿದೆ: 2021ರಲ್ಲಿ ರಾಜ್ ಸಕ್ಸೇನಾ ತನ್ನ ಮೊದಲ ಪತ್ನಿಯನ್ನು ಮದುವೆಯಾಗಿದ್ದ. ಆದರೆ ಮದುವೆಯಾಗಿ ಒಂದು ವರ್ಷವಲ್ಲದೆ ಆಕೆ ಅನಾರೋಗ್ಯದಿಂದ ಸಾವನ್ನಪ್ಪಿದಳು. ಪತ್ನಿಯ ನಿಧನದ ನಂತರ, ಅವನು ಆಕೆಯ ತಂಗಿಯ ಜೊತೆ ಮದುವೆಯಾಗಿದನು. ಈ ದಂಪತಿಗೆ ಈಗ ಎರಡು ವರ್ಷ.

ಆದರೆ ಇತ್ತೀಚೆಗೆ ರಾಜ್ ತನ್ನ ಮುದ್ದಾದ ಪತ್ನಿಯ ಮತ್ತೊಬ್ಬ ತಂಗಿಯನ್ನು ಮದುವೆಯಾಗಬೇಕು ಎಂದು ಹೇಳಿದ್ದು, ಮನೆಯವರ ವಿರೋಧ ಎದುರಾಗಿದೆ. ಈ ಬೇಡಿಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ರಾಜ್ ಗುರುವಾರ ಬೆಳಿಗ್ಗೆ ಒಂದು ಕರೆಂಟ್ ಟವರ್ ಏರಿ ಆತ್ಮಹತ್ಯೆಗೆ ಧಮಕಿ ನೀಡಿದ್ದಾನೆ.

‘ನಾದಿನಿಯನ್ನು ಮದುವೆ ಮಾಡಿಸುತ್ತೀರಾ ಇಲ್ಲವೇ ನಾನು ಜಂಪ್ ಮಾಡ್ತೀನಿ’ ಎಂದು ಬೆದರಿಕೆ:

ಬಾಲಿವುಡ್ ಶೋಲೆ ಸಿನಿಮಾ ಶೈಲಿಯಲ್ಲಿ ರಾಜ್ ಟವರ್ ಮೇಲಿಂದಲೇ ಬೊಬ್ಬೆ ಹಾಕುತ್ತಾ “ನಾದಿನಿಯನ್ನು ನನ್ನಿಗೆ ಮದುವೆ ಮಾಡಿಸಿ” ಎಂದು ಕೂಗಿದ್ದಾನೆ. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸತತ 7 ಗಂಟೆಗಳ ಸಾಹಸ ನಂತರ ಅವನನ್ನು ಟವರ್‌ನಿಂದ ಕೆಳಗೆ ಇಳಿಸಲು ಯಶಸ್ವಿಯಾದರು. ಕೊನೆಗೆ ನಾದಿನಿಯೊಂದಿಗೆ ಮದುವೆ ಮಾಡಿಸುತ್ತೇವೆ ಎಂಬ ಭರವಸೆ ನೀಡಿದ ನಂತರ ಮಾತ್ರ ಆತ ಕೆಳಗಿಳಿದ.

ಪ್ರೀತಿಯ ನಾಟಕವೇ ಪಕ್ಕಾ ಸಾಂಡಲ್‌ವುಡ್ ಸೀನ್!

ಟವರ್ ಮೇಲಿನ ಈ ಹೈಡ್ರಾಮಾ ಸ್ಥಳೀಯ ಜನರ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿಯಲ್ಪಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ ಸಕ್ಸೇನಾ ತನ್ನ ಮೇಲಿಂದಲೇ ನಾದಿನಿಯೂ ಅವನನ್ನು ಪ್ರೀತಿಸುತ್ತಿದ್ದಾಳೆ ಎಂದು ಹೇಳಿದ್ದಾನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!