ಅಭಿಮಾನಿಗಳನ್ನು ನೋಡಿ ದಳಪತಿ ವಿಜಯ್ ಅವರು ಭಾವುಕರಾದರು. ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಅವರು ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದಾಗಿ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದಿದ್ದಾರೆ.ವಿಜಯ್ ಅವರು ಸಮಾವೇಶದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಸೇರಿಸಿದ್ದಾರೆ ನಿಜ. ಆದರೆ, ಇದನ್ನು ಅವರು ಮತವಾಗಿ ಬದಲಾಯಿಸಲು ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ. ಒಂದೊಮ್ಮೆ ಬಂದವರೆಲ್ಲರೂ ಟಿವಿಕೆಗೆ ಮತ ಹಾಕಿದರೆ ಅವರ ಪಕ್ಷ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ವಿಜಯ್ ಅವರು ಮಧುರೈನ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸೋದಾಗಿ ಹೇಳಿದ್ದಾರೆ. ಚುನಾವಣೆಗೆ ಒಂದು ವರ್ಷ ಇರುವಾಗಲೇ ಅವರು ಈ ರೀತಿಯ ಘೋಷಣೆ ಮಾಡಿದ್ದಾರೆ ಅನ್ನೋದು ವಿಶೇಷ. ಪಕ್ಷ ಗೆದ್ದರೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.




