ದಳಪತಿ ವಿಜಯ್ ಸಮಾವೇಶಕ್ಕೆ ಸೇರಿರುವ ಜನಸಂಖ್ಯೆ ಅಚ್ಚರಿ ಮೂಡಿಸುವಂತೆ ಇದೆ.

ದಳಪತಿ ವಿಜಯ್ ಅವರು ತಮ್ಮದೇ ಸ್ವಂತ ಪಕ್ಷ ಕಟ್ಟಿದ್ದು, ಟಿವಿಕೆ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷ 2026ರ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲಿದೆ. ದಳಪತಿ ವಿಜಯ್ ಅವರ ಅಭಿಮಾನಿ ಬಳಗ ದೊಡ್ದದಿದೆ. ಹೀರೋ ಆಗಿ ಅವರು ಸಾಕಷ್ಟು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಅದು ಮತ್ತೊಮ್ಮೆ ಸಾಬೀತಾಗಿದೆ. ಮಧುರೈನ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಪಕ್ಷ ಘೋಷಣೆ ವೇಳೆ ವಿಜಯ್ ಅವರು ದೊಡ್ಡ ಸಮಾವೇಶ ಆಯೋಜನೆ ಮಾಡಿದ್ದರು. ಇದಾದ ಬಳಿಕ ನಡೆದ ಮತ್ತೊಂದು ದೊಡ್ಡ ಸಮಾವೇಶ ಇದಾಗಿದೆ. ಮಧುರೈ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯ ಜನರು ನೆರೆದಿದ್ದರು. ಆ ಫೋಟೋಗಳು ವೈರಲ್ ಆಗಿವೆ.

 

ಅಭಿಮಾನಿಗಳನ್ನು ನೋಡಿ ದಳಪತಿ ವಿಜಯ್ ಅವರು ಭಾವುಕರಾದರು. ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಅವರು ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದಾಗಿ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದಿದ್ದಾರೆ.ವಿಜಯ್ ಅವರು ಸಮಾವೇಶದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಸೇರಿಸಿದ್ದಾರೆ ನಿಜ. ಆದರೆ, ಇದನ್ನು ಅವರು ಮತವಾಗಿ ಬದಲಾಯಿಸಲು ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ. ಒಂದೊಮ್ಮೆ ಬಂದವರೆಲ್ಲರೂ ಟಿವಿಕೆಗೆ ಮತ ಹಾಕಿದರೆ ಅವರ ಪಕ್ಷ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ವಿಜಯ್ ಅವರು ಮಧುರೈನ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸೋದಾಗಿ ಹೇಳಿದ್ದಾರೆ. ಚುನಾವಣೆಗೆ ಒಂದು ವರ್ಷ ಇರುವಾಗಲೇ ಅವರು ಈ ರೀತಿಯ ಘೋಷಣೆ ಮಾಡಿದ್ದಾರೆ ಅನ್ನೋದು ವಿಶೇಷ. ಪಕ್ಷ ಗೆದ್ದರೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!