ದಲೈ ಲಾಮರಿಂದ ಆಶೀರ್ವಾದ ಪಡೆದ GD ಹರೀಶ್ ಗೌಡ.. ನಿಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಹಾರೈಕೆ

ಟಿಬೇಟಿಯನ್ನರ ಅತ್ಯುಚ್ಛ ಧರ್ಮಗುರು, ನೊಬೆಲ್ ಶಾಂತಿಪ್ರಶಸ್ತಿ ಪುರಸ್ಕೃತ ೧೪ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ಮಾಡಿ ಆಶೀರ್ವಾದ ಪಡೆದರು.ತಾಲೂಕಿನ ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ಬೀಡುಬಿಟ್ಟಿರುವ ಧರ್ಮಗುರು ದಲೈಲಾಮರನ್ನು ಭೇಟಿ ಮಾಡಿದ ವೇಳೆ ಶಾಸಕರನ್ನು ತುಂಬುಹೃದಯದಿಂದ ಆಶೀರ್ವದಿಸಿ, ನಿಮ್ಮ ಭವಿಷ್ಯ ಉಲ್ವಲವಾಗಿ ಬೆಳಗಲಿ ಎಂದು ಹಾರೈಸಿದರು. ನಂತರ ಧರ್ಮಗುರುಗಳೊಂದಿಗಿನ ಗಂಟೆಗೂ ಹೆಚ್ಚು ಕಾಲ ಹರೀಶ್‌ಗೌಡ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿzರು. ಈ ವೇಳೆ ಮಾತನಾಡಿದ ಅವರು, ಧರ್ಮಗುರುಗಳ ಭೇಟಿ ಮತ್ತು ನೀಡಿದ ಆಶೀರ್ವಾದ ನನ್ನ ಮನಸನ್ನು ಉಲ್ಲಸಿತಗೊಳಿಸಿದೆ. ಅವರಿಂದ ಸಕಾರಾತ್ಮಕ ಶಕ್ತಿಗಳನ್ನು ಪಡದಿದ್ದೇನೆ. ತಮ್ಮ ತಾಯಿನಾಡಿಗಾಗಿ ಶಾಂತಿಯುತವಾಗಿ ಹಲವು ದಶಕಗಳಿಂದ ಹೋರಾಡುತ್ತಿರುವ ಟಿಬೇಟಿಯನ್ನರಿಗೆ ಭಾರತ ಬೆನ್ನೆಲುಬಾಗಿ ನಿಂತಿದೆ. ಅವರ ಹೋರಾಟಕ್ಕೆ ಶೀಘ್ರ ಫಲಸಿಕ್ಕಲಿ ಎಂದು ಆಶಿಸುತ್ತೇನೆ ಎಂದರು.

ಈ ವೇಳೆ ಟಿಬೇಟಿಯನ್ ಪುನರ್ವಸತಿ ಕೇಂದ್ರದ ಅಧಿಕಾರಿಗಳು, ಮತ್ತು ಟಿಬೇಟಿಯನ್ ನಿವಾಸಿಗಳು ಹಾಜರಿದ್ದರು. ಹುಣಸೂರು ತಾಲೂಕು ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿರುವ ಟಿಬೇಟಿಯನ್ ಧರ್ಮಗುರು ೧೪ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ಮಾಡಿ ಆರ್ಶೀವಾದ ಪಡೆದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!