ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ.

ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್​ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ.

ಗುರುವಾರ ಅಂದ್ರೆ ಆಗಸ್ಟ್​​ 13.. ನಟ ದರ್ಶನ್​ ಬಾಳಲ್ಲಿ ಮತ್ತೊಂದು ಬಿರುಗಾಳಿ ಬೀಸಿದ ದಿನ. ಸುಪ್ರೀಂ ಕೋರ್ಟ್​ ದರ್ಶನ್​ ಬೇಲ್​ಗೆ ಬ್ರೇಕ್ ಹಾಕ್ತಿದ್ದಂತೆ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್​ಗೆ​ ಮತ್ತೆ ಪರಪ್ಪನ ಅಗ್ರಹಾರದ ದರ್ಶನ ಮಾಡಿಸಿದ್ರು. ಇಂದಿಗೆ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಭರ್ತಿ ಎರಡು ರಾತ್ರಿ ಕಳೆದಂತಾಗಿದೆ. ಮತ್ತದೇ ಮೌನಗಾನ, ಮನೆಯ ಧ್ಯಾನ ದರ್ಶನ್​ನ ಕಾಡಿದೆ.

ಅಂದು ಡಿ ಫ್ಯಾನ್ಸ್​ ವಿರುದ್ಧ ವಾರ್​.. ಇಂದು ದರ್ಶನ್ ಸ್ಥಿತಿಗೆ ಮರುಕ!  ನಟ ದರ್ಶನ್​ ಮತ್ತೆ ಪರಪ್ಪನ ಅಗ್ರಹಾರ ಪಾಲಾದ ಬಗ್ಗೆ ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ದರ್ಶನ್​ ಫ್ಯಾನ್ಸ್​​ ವಿರುದ್ಧ ಸಮರ ಸಾರಿದ್ದ ಸ್ಯಾಂಡಲ್​ವುಡ್​ ಕ್ವೀನ್ ದರ್ಶನ್​ ಜೊತೆಗಿನ ಹಳೇ ನೆನಪುಗಳನ್ನ ಮೆಲುಕು ಹಾಕಿ ಅವರಿಗೆ ಈ ಸ್ಥಿತಿ ಬರ್ಬಾದಿತ್ತು ಎಂದಿದ್ದಾರೆ.

ದರ್ಶನ್ ಜೈಲು ಸೇರಿದ್ದು ಬೇಸರ! ಜಡ್ಜ್​ಮೆಂಟ್​ ಕೇಳಿದಾಗ ನನಗೆ ಮಿಕ್ಸ್​ ರಿಯಾಕ್ಷನ್​ ಇತ್ತು. ಒಂದು ಕಡೆ ನನಗೆ ಸ್ವಲ್ಪ ಬೇಜಾರು ಆಯ್ತು.. ದರ್ಶನ್ ಅವರ ಜೊತೆ ನಾನು ಕೆಲಸ ಮಾಡಿದೀನಿ, ಅವರು ಗೊತ್ತಿರೋರು. ಸೋ ಎಲ್ಲೋ ಒಂದು ಕಡೆ ನನಗೆ ಬೇಜಾರು ಏನಂದ್ರೆ ಅವರ ಜೀವನ ಹಾಳು ಮಾಡಿಕೊಂಡ್ರು. ಯಾಕಂದ್ರೆ ನಾವು ಶೂಟ್​ ಮಾಡುವಾಗ ಕೆಲವೊಂದು ವಿಚಾರವನ್ನು ಅವರು ಹಂಚಿಕೊಂಡಿದ್ರು. ತಾವು ಸಿನಿಮಾ ಇಂಡಸ್ಟ್ರಿಗೆ ಹೇಗೆ ಬಂದ್ರು ಅನ್ನೋದ್ರ ಬಗ್ಗೆ ಹೇಳಿದ್ದರು. ಏನು ಇಲ್ಲದವ್ರು ಕಷ್ಟಪಟ್ಟು ಇಂಡಸ್ಟ್ರಿಗೆ ಬಂದು.. ಲೈಟ್​ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ ಅಂತ ಎಲ್ಲೋ ಒಂದು ಕಡೆ ಹೆಮ್ಮೆನೂ ಇತ್ತು.
ರಮ್ಯಾ, ನಟಿ ಪರಪ್ಪನ ಅಗ್ರಹಾರದ ಪವಿತ್ರಾ ಬಗ್ಗೆಯೂ ರಮ್ಯಾ ಬೇಸರ

ಮತ್ತೆ ಪರಪ್ಪನ ಅಗ್ರಹಾರದ ಪಾಲಾಗಿರೋ ದರ್ಶನ್​ ಗೆಳತಿ ಪವಿತ್ರಾ ಗೌಡ ಬಗ್ಗೆಯೂ ರಮ್ಯಾ ಬೇಸರ ಹೊರಹಾಕಿದ್ದಾರೆ. ಆಕೆಯೂ ಒಬ್ಬ ತಾಯಿ, ಹೀಗಾಗಬಾರದಿತ್ತು ಎಂದಿದ್ದಾರೆ.ಆ್ಯಕ್ಚುಲಿ ನನಗೆ ಪವಿತ್ರಾ ಗೌಡ ಅಂದ್ರೆ ಯಾರು ಅಂತನೇ ಗೊತ್ತಿರಲಿಲ್ಲ. ಈ ರೇಣುಕಾಸ್ವಾಮಿ ಕೇಸ್ ಆದಮೇಲೆಯೇ ನನಗೆ ಗೊತ್ತಾಗಿದ್ದು. ಒಂದು ಕಡೆ ಬೇಜಾರಾಗುತ್ತೆ ಯಾಕಂದ್ರೆ, ಆಕೆಯೂ ಒಬ್ಬಳು ತಾಯಿ.. ಒಬ್ಬಳು ಮಗಳಿದ್ದಾರೆ. ಈ ರೇಣುಕಾಸ್ವಾಮಿ ಅವರ ಫ್ಯಾಮಿಲಿ.. ಯಾಕಂದ್ರೆ ಅವರು ಬಡವರು.. ಆ ಈಗ ಅವರ ಈ ಅವರ ಪತ್ನಿ ಸಹ ಮಗುವನ್ನ ಹೊಂದಿದ್ದಾರೆ. ಸೋ ಅವರಿಗೆ ಎಲ್ಲೋ ಒಂದು ಕಡೆ ಜಸ್ಟೀಸ್​ ಸಿಕ್ಕಿದೆ ಅಂತ ನಾನು ಅನ್ಕೋತಿನಿ.

ಒಟ್ನಲ್ಲಿ ನೀರಿನ ಮೊರೆತಕ್ಕೆ ಬಂಡೆಯೂ ಕರಗುತ್ತೆ ಅನ್ನೋ ಹಾಗೆ ಬ್ಯಾಕ್​ ಟು ಬ್ಯಾಕ್​ ದರ್ಶನ್​ಗೆ ಸಂಕಷ್ಟ ಎದುರಾಗ್ತಿರೋದು ಸದ್ಯ ನಟಿ ರಮ್ಯಾರಿಗೂ ಬೇಸರ ಬರುವಂತೆ ಮಾಡಿದೆ. ದರ್ಶನ್ ಮತ್ತು ದರ್ಶನ್ ಫ್ಯಾನ್ಸ್​ ವಿರುದ್ಧ ರಣಚಂಡಿಯಾಗಿದ್ದ ರಮ್ಯಾ ಏಕಾಏಕಿ ಇಷ್ಟು ಸಾಫ್ಟ್​ ಆಗಿದ್ದು ಅಚ್ಚರಿಯನ್ನೂ ಮೂಡಿಸಿದೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!