ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್​​​ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್​​ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸ್ತಿದ್ದಾರೆ.. ಕೆಲ ದಿನಗಳಲ್ಲೇ ಟ್ರಯಲ್ ಕೋರ್ಟ್​ನಲ್ಲಿ ವಿಚಾರಣೆ ಆರಂಭ ಆಗಲಿದ್ದು ಬಳ್ಳಾರಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ

ನಟ ದರ್ಶನ್​ಗೆಗೆ ಪರಪ್ಪನ ಅಗ್ರಹಾರ ಜೈಲು ನರಕವಾಗಿ ಪರಿಣಮಿಸಿದೆ. ಹೀಗಾಗಿ ಹಾಸಿಗೆ, ದಿಂಬು ಹಾಗೂ ಮನೆ ಊಟಕ್ಕೆ ಅನುಮತಿ ಕೋರಿ ನ್ಯಾಯಾಲಯದಲ್ಲಿ ವಿಚಾರಣೆ ನಡೀತಿದ್ದು ಇನ್ನಷ್ಟೇ ತೀರ್ಮಾನ ಆಗ್ಬೇಕಿದೆ.. ಈ ನಡುವೆ ನಟ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಾ, ಇಲ್ವಾ ಅನುಮಾನ ಮೂಡಿಸಿದೆ.. ಈ ಹಿಂದೆಯೂ ಜೈಲಿನ ನಿಯಮದ ಪ್ರಕಾರ ಸೌಕರ್ಯ ನೀಡಿದ್ರೂ ಕೈದಿಗಳು ಅದನ್ನು ದುರುಪಯೋಗ ಪಡಿಸಿಕೊಂಡಿದ್ದರು. ಮತ್ತೊಂದೆಡೆ ದರ್ಶನ್​ಗೆ ಸೌಲಭ್ಯ ನೀಡಿದ್ದಕ್ಕೆ ಗರಂ ಆಗಿದ್ದ ಸುಪ್ರೀಂಕೋರ್ಟ್ ಅಧಿಕಾರಿಗಳಿಗೆ ಅಮಾನತಿಗೆ ಎಚ್ಚರಿಕೆ ಕೂಡ ನೀಡಿತ್ತು.. ಹೀಗಾಗಿ ನಟ ದರ್ಶನ್​ಗೆ ಜೈಲಾಧಿಕಾರಿಗಳು ಸೌಕರ್ಯ ಕೊಡಲು ಹಿಂದೇಟು ಹಾಕ್ತಿದ್ದಾರೆ.

ದಾಸನಿಗಿಲ್ಲ ರಾಜಾತಿಥ್ಯ!

ದಪ್ಪನೆ ಹಾಸಿಗೆಗಳಲ್ಲಿ ಮೊಬೈಲ್, ಸಿಮ್ ಕಾರ್ಡ್ ಇಡುವ ಸಾಧ್ಯತೆ
ಈ ಹಿಂದೆ ಹಲವರ ಬಳಿ ಮೊಬೈಲ್ ಸಿಮ್ ಪತ್ತೆ ಹಚ್ಚಿ ಪೊಲೀಸರು
ಜೈಲಿನ ಮೇಲೆ ಸಿಸಿಬಿ ದಾಳಿಯ ವೇಳೆಯೂ ಮೊಬೈಲ್​ಗಳು ಪತ್ತೆ
ಹಾಸಿಗೆ, ದಿಂಬುಗಳಲ್ಲಿ ಮೊಬೈಲ್​ಗಳನ್ನು ಅಡಗಿಸಿಡುವ ಆತಂಕ
ಹಳೆಯ ಘಟನೆಗಳಿಂದ ಆರೋಪಿ ದರ್ಶನ್ ಮೇಲೂ ಪರಿಣಾಮ
ಅಲ್ಲದೇ ರಾಜಾತಿಥ್ಯ ವಿಚಾರವಾಗಿ ಸುಪ್ರೀಂಕೋರ್ಟ್ ತರಾಟೆ
ಸೆಲೆಬ್ರಿಟಿ ಅಂತಾ ವಿಶೇಷ ಫೆಸಿಲಿಟಿ ಕೊಡಬಾರದು ಅಂತ ಆದೇಶ
ಅಂತಹ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ
ಆದೇಶದ ಮಧ್ಯೆಯೂ ವ್ಯವಸ್ಥೆ ಮಾಡಿದ್ರೆ ಕುತ್ತು ಬರುವ ಆತಂಕ
ದರ್ಶನ್​ಗೆ ಸವಲತ್ತು ಕೊಟ್ರೆ ಉಳಿದ ಕೈದಿಗಳು ಕೇಳುವ ಸಾಧ್ಯತೆ
ಇದೇ ಕಾರಣ ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು

ಒಂದ್ಕಡೆ ಸುಪ್ರೀಂ ಕೋರ್ಟ್ ಭಯ.. ಮತ್ತೊಂದೆಡೆ ಉಳಿದ ಕೈದಿಗಳು ಸೌಲಭ್ಯ ಕೇಳುವ ಪರಿಸ್ಥಿತಿ ಇದೆ, ಬೆನ್ನುನೋವು ಸೇರಿ ಇತರೆ ಆರೋಗ್ಯ ಸಮಸ್ಯೆಗಳಿದ್ದು ಹಾಸಿಗೆ, ತಲೆದಿಂಬು ಇಲ್ಲದೆ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಜೈಲೂಟ ಕೂಡ ದೇಹಕ್ಕೆ ಒಗ್ಗದೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೇನೆ. ಹೀಗಾಗಿ ಕನಿಷ್ಠ ಸೌಲಭ್ಯ ನೀಡ್ಬೇಕು ಅಂತ ದರ್ಶನ್ ಮನವಿ ಮಾಡಿದ್ದಾರೆ.. ಸದ್ಯ ಸೆಪ್ಟೆಂಬರ್ 9ಕ್ಕೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ ಅನ್ನೋ ತೀರ್ಪು ಹೊರಬೀಳಲಿದೆ.. ಆವತ್ತೇ ಜೈಲಲ್ಲಿ ಸವಲತ್ತು ನೀಡುವ ಕುರಿತು ಕೋರ್ಟ್​ ತೀರ್ಪು ನೀಡುವ ಸಾಧ್ಯತೆ ಇದೆ, ಅದೇನೇ ಇರಲಿ, ಬಣ್ಣದ ಲೋಕದಲ್ಲಿ ಕೋಟ್ಯಂತರ ಅಭಿಮಾನಿಗಳ ದಾಸನ ಪರಿಸ್ಥಿತಿ ಮಾತ್ರ​​​ ಮಾಡಿದ್ದುಣ್ಣೋ ಮಹರಾಯ ಎನ್ನುವಂತಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!