ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ! ಅರಣ್ಯ ಇಲಾಖೆ ಸೌಲಭ್ಯ.

ಮೈಸೂರು ದಸರಾ 2025ರ ಗಜಪಡೆ, ಮಾವುತರು ಮತ್ತು ಸಿಬ್ಬಂದಿಗೆ ಒಟ್ಟು 2.04 ಕೋಟಿ ರೂ ವಿಮಾ ಸೌಲಭ್ಯ ಒದಗಿಸಲಾಗಿದೆ. ಆನೆಗಳಿಗೆ 68 ಲಕ್ಷ ರೂ, ಸಿಬ್ಬಂದಿಗೆ 86 ಲಕ್ಷ ರೂ ಮತ್ತು ಸಾರ್ವಜನಿಕ ಹಾನಿಗೆ 50 ಲಕ್ಷ ರೂ ವಿಮೆ ಒಳಗೊಂಡಿದೆ. ಈ ವಿಮಾ ಪಾಲಿಸಿಯು ಆಗಸ್ಟ್ 4 ರಿಂದ ಅಕ್ಟೋಬರ್ 5 ರವರೆಗೆ ಜಾರಿಯಿರಲಿದೆ. ಮೈಸೂರು ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ ಸೌಲಭ್ಯ ನೀಡಿದ ಅರಣ್ಯ ಇಲಾಖೆ

ಮೈಸೂರು, ಆಗಸ್ಟ್​ 06: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ನಾಡಹಬ್ಬ ದಸರಾ (Mysuru Dasara) ಮಹೋತ್ಸವಕ್ಕೆ ಮೈಸೂರಿಗೆ ಬಂದ ಕ್ಯಾಪ್ಟನ್ ಅಭಿಮನ್ಯು ಆ್ಯಂಡ್​ ತಂಡ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಗಜಪಡೆ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ‌. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ.

2.04 ಕೋಟಿ ರೂ. ಮೊತ್ತದ ವಿಮೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ ಶುರುವಾಗಿದೆ. ಇತ್ತ ಗಜಪಡೆ ಕೂಡ ಮೈಸೂರಿಗೆ ಬಂದಿದೆ. ಈ ಗಜಪಡೆ ಮೈಸೂರಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ವಿಮಾ ಸೌಲಭ್ಯದ ಮೊರೆ ಹೋಗಲಾಗಿದೆ. ಆಗಸ್ಟ್​ 4ರಿಂದ ಅಕ್ಟೋಬರ್​​ 5ರವರೆಗೆ ಈ ಸುರಕ್ಷತೆ ಚಾಲ್ತಿಯಲ್ಲಿರಲಿದೆ. ಟೆಂಡರ್‌ ಮೂಲಕ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ ವಿಮೆ ಸೌಲಭ್ಯ ಮಾಡಿಸಲಾಗಿದೆ.

ಬೆಳಗಿನ ಜಾವದಿಂದಲೇ ದೇವಿದರ್ಶನಕ್ಕಾಗಿ ಸಾಲುಗಟ್ಟಿರುವ ಭಕ್ತರು
ದಸರಾ ಗಜಪಡೆಯ 14 ಆನೆಗಳ ಪೈಕಿ ಈ ಬಾರಿ 10 ಗಂಡಾನೆಗಳಿವೆ. ಈ ಗಂಡಾನೆಗಳಿಗೆ ತಲಾ 5 ಲಕ್ಷ ರೂ, 4 ಹೆಣ್ಣಾನೆಗಳಿಗೆ ತಲಾ 4.5 ಲಕ್ಷ ರೂ. 14 ಆನೆಗಳಿಗೆ ಒಟ್ಟು 68 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. 14 ಮಾವುತರು, 14 ಕಾವಾಡಿಗಳು, ಡಿಸಿಎಫ್, ಇಬ್ಬರು ಆರ್‌ಎಫ್‌ಓ, ಪಶುವೈದ್ಯಾಧಿಕಾರಿ, ಓರ್ವ ಸಹಾಯಕರು, 10 ಮಂದಿ ವಿಶೇಷ ಮಾವುತರು ಸೇರಿ ಒಟ್ಟು 43 ಮಂದಿಗೆ ತಲಾ 2 ಲಕ್ಷ ರೂ.ನಂತೆ 86 ಲಕ್ಷ ರೂ. ಮೊತ್ತದ ವಿಮೆ ಸೌಲಭ್ಯ ನೀಡಲಾಗಿದೆ.

ಮೈಸೂರಿನಲ್ಲಿ ದಸರಾ ಆನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶ ಅಥವಾ ಸಾರ್ವಜನಿಕರಿಗೆ ತೊಂದರೆಯಾದರೆ ನಷ್ಟ ಭರಿಸಲು 50 ಲಕ್ಷ ರೂ. ಒಟ್ಟು 2.04 ಕೋಟಿ ರೂ. ಮೊತ್ತದ ವಿಮೆ ಮಾಡಿಸಿದ್ದು, ಇದಕ್ಕೆ ಅರಣ್ಯ ಇಲಾಖೆಯಿಂದ 67 ಸಾವಿರ ರೂ ಪ್ರಿಮಿಯಂ ಮೊತ್ತ ಪಾವತಿ ಮಾಡಲಾಗುವುದು.

ಅಭಿಮನ್ಯು ನೇತೃತ್ವದ 9 ಆನೆಗಳ ಮೊದಲ ತಂಡ ಮೈಸೂರಿಗೆ ಬರ್ತಿದ್ದಂತೆಯೇ, ರಕ್ತ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಆನೆಗಳು ಆರೋಗ್ಯವಾಗಿವೆ. ಆಗಸ್ಟ್​ 10ರಂದು ದಸರಾ ಗಜಪಡೆ ಮೈಸೂರು ಅರಮನೆಗೆ ಎಂಟ್ರಿ ಕೊಡಲಿವೆ. ಇದೇ ಮೂದಲ ಬಾರಿಗೆ ಸಂಜೆ ವೇಳೆ ಗಜಪಡೆಯನ್ನ ಅರಮನೆಗೆ ಸ್ವಾಗತಿಸಲಾಗುತ್ತಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!