ದಳಪತಿ ವಿಜಯ್ ಸಮಾವೇಶಕ್ಕೆ ಸೇರಿರುವ ಜನಸಂಖ್ಯೆ ಅಚ್ಚರಿ ಮೂಡಿಸುವಂತೆ ಇದೆ.

ದಳಪತಿ ವಿಜಯ್ ಅವರು ತಮ್ಮದೇ ಸ್ವಂತ ಪಕ್ಷ ಕಟ್ಟಿದ್ದು, ಟಿವಿಕೆ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷ 2026ರ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲಿದೆ. ದಳಪತಿ ವಿಜಯ್ ಅವರ ಅಭಿಮಾನಿ ಬಳಗ ದೊಡ್ದದಿದೆ. ಹೀರೋ ಆಗಿ ಅವರು ಸಾಕಷ್ಟು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಅದು ಮತ್ತೊಮ್ಮೆ ಸಾಬೀತಾಗಿದೆ. ಮಧುರೈನ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಪಕ್ಷ ಘೋಷಣೆ ವೇಳೆ ವಿಜಯ್ ಅವರು ದೊಡ್ಡ ಸಮಾವೇಶ ಆಯೋಜನೆ ಮಾಡಿದ್ದರು. ಇದಾದ ಬಳಿಕ ನಡೆದ ಮತ್ತೊಂದು ದೊಡ್ಡ ಸಮಾವೇಶ ಇದಾಗಿದೆ. ಮಧುರೈ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯ ಜನರು ನೆರೆದಿದ್ದರು. ಆ ಫೋಟೋಗಳು ವೈರಲ್ ಆಗಿವೆ.

 

ಅಭಿಮಾನಿಗಳನ್ನು ನೋಡಿ ದಳಪತಿ ವಿಜಯ್ ಅವರು ಭಾವುಕರಾದರು. ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಅವರು ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದಾಗಿ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದಿದ್ದಾರೆ.ವಿಜಯ್ ಅವರು ಸಮಾವೇಶದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಸೇರಿಸಿದ್ದಾರೆ ನಿಜ. ಆದರೆ, ಇದನ್ನು ಅವರು ಮತವಾಗಿ ಬದಲಾಯಿಸಲು ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ. ಒಂದೊಮ್ಮೆ ಬಂದವರೆಲ್ಲರೂ ಟಿವಿಕೆಗೆ ಮತ ಹಾಕಿದರೆ ಅವರ ಪಕ್ಷ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ವಿಜಯ್ ಅವರು ಮಧುರೈನ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸೋದಾಗಿ ಹೇಳಿದ್ದಾರೆ. ಚುನಾವಣೆಗೆ ಒಂದು ವರ್ಷ ಇರುವಾಗಲೇ ಅವರು ಈ ರೀತಿಯ ಘೋಷಣೆ ಮಾಡಿದ್ದಾರೆ ಅನ್ನೋದು ವಿಶೇಷ. ಪಕ್ಷ ಗೆದ್ದರೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!