ಮಂಡ್ಯದ ಗಂಡು​ ಅಂಬಿಗೂ ಕರ್ನಾಟಕ ರತ್ನ ನೀಡುವಂತೆ ಆಗ್ರಹ

ವಿಷ್ಣುವರ್ಧನ್ ಆಯ್ತು, ಈಗ ರೆಬಲ್ ಸ್ಟಾರ್​ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಂಬಿ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇವತ್ತು ರೆಬಲ್ ಸ್ಟಾರ್​ ಅಭಿಮಾನಿಗಳ ಪರವಾಗಿ ಹಿರಿಯ ನಟಿ ತಾರಮ್ಮ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಇತ್ತಿಚೆಗೆ ಕರ್ನಾಟಕ ಸರ್ಕಾರ ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾ ದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಗೌರವ ಘೋಷಣೆ ಮಾಡಿದೆ. ಬೆನ್ನಲ್ಲೇ ರೆಬೆಲ್​ ಸ್ಟಾರ್ ಅಂಬರೀಶ್​ ಅವರಿಗೂ ‘ಕರ್ನಾಟಕ ರತ್ನ’ ನೀಡುವಂತೆ ಕೂಗು ಕೇಳಿ ಬಂದಿದೆ.

ಇವತ್ತು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು. ಭೇಟಿ ವೇಳೆ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಅಂಬಿ ಫ್ಯಾನ್ಸ್​ ಪರ ತಾರಾ ಮನವಿ:ಅಂಬರೀಶ್​ಗೆ ಕರ್ನಾಟಕ ರತ್ನ ನೀಡಬೇಕು ಅನ್ನೋದು ಅಂಬಿ ಅಭಿಮಾನಿಗಳ ಒತ್ತಾಸೆ. ನೀವೂ ಕೂಡ (ಡಿಕೆ ಶಿವಕುಮಾರ್) ಅಂಬಿ ಅವರನ್ನ ತುಂಬಾ ಹತ್ತಿರದಿಂದ ಕಂಡಿದ್ದೀರಾ. ವಿಷ್ಣುವರ್ಧನ್​ ಹಾಗೂ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರೊದು ಬಹಳ ಸಂತೋಷದ ಸುದ್ದಿ. ಜೊತೆಗೆ ಅಂಬರೀಶ್​ಗೂ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಎಂದು ತಾರಾ ಅನುರಾಧ ಮನವಿ ಮಾಡಿಕೊಂಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!