ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!

 

ಕರ್ನಾಟಕದಲ್ಲಿ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗಿವೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಬ್ಯಾಕ್ಟೀರಿಯಾ ಸೋಂಕು. ಜ್ವರ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು. ಕಲುಷಿತ ನೀರು ಮತ್ತು ಮಣ್ಣಿನ ಸಂಪರ್ಕದಿಂದ ಹರಡುತ್ತದೆ. ರೋಗ ತಡೆಗಟ್ಟಲು ನೈರ್ಮಲ್ಯ ಕಾಪಾಡುವುದು, ಶುದ್ಧ ನೀರು ಕುಡಿಯುವುದು ಮತ್ತು ಮುನ್ನೆಚ್ಚರಿಕೆ ಕ್ರಮಗಳು ಇಲ್ಲಿವೆ.

ರಾಜ್ಯದಲ್ಲಿ ಲೆಪ್ಟೋಸ್ಪೈರೋಸಿಸ್ ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸುಮಾರು 30 ಮಂದಿ ಮೃತಪಟ್ಟಿದ್ದಾರೆ. ಪ್ರತಿ ವರ್ಷವೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಎಬ್ಬಿಸಿದೆ .ವರ್ಷವಾರು ಅಂಕಿಅಂಶಗಳನ್ನು ಗಮನಿಸಿದರೆ 2020ರಲ್ಲಿ 544 ಪ್ರಕರಣಗಳು ದಾಖಲಾಗಿದ್ದರೆ, 2021ರಲ್ಲಿ 906 ಪ್ರಕರಣಗಳು ಕಂಡುಬಂದಿವೆ. ಬಳಿಕ 2022ರಲ್ಲಿ 3,174 ಪ್ರಕರಣಗಳು, 2023ರಲ್ಲಿ 5,404 ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 5,088 ಪ್ರಕರಣಗಳು ವರದಿಯಾಗಿದ್ದು, 2025ರಲ್ಲಿ ಈ ಸಂಖ್ಯೆ 6,525ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಮಾತ್ರವೇ 19 ಮಂದಿ ಈ ಸೋಂಕಿನಿಂದ ಮೃತಪಟ್ಟಿದ್ದಾರೆ.

ಲೆಪ್ಟೋಸ್ಪೈರೋಸಿಸ್ ಒಂದು ಝೂನೋಟಿಕ್ ಬ್ಯಾಕ್ಟೀರಿಯಾ ಸೋಂಕಾಗಿದ್ದು, ಸೋಂಕಿತ ಪ್ರಾಣಿಗಳ ಮೂತ್ರದ ಸಂಪರ್ಕದಿಂದ ಅಥವಾ ಅದರಿಂದ ಮಾಲಿನ್ಯಗೊಂಡ ನೀರು ಮತ್ತು ಮಣ್ಣಿನ ಸಂಪರ್ಕದಿಂದ ಹರಡುತ್ತದೆ. ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿರುವುದರಿಂದ ಇದನ್ನು ಡೆಂಗ್ಯೂ ಅಥವಾ ಮಲೇರಿಯಾ ಎಂದು ತಪ್ಪಾಗಿ ಗುರುತಿಸುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಸೋಂಕು ತಗುಲಿದ ನಂತರ ಸಾಮಾನ್ಯವಾಗಿ 2 ರಿಂದ 14 ದಿನಗಳೊಳಗೆ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಆರಂಭಿಕ ಲಕ್ಷಣಗಳು
ಜ್ವರ,ತೀವ್ರ ತಲೆನೋವು ,ದೇಹ ನೋವು, ವಿಶೇಷವಾಗಿ ಕಾಲು ಮತ್ತು ಬೆನ್ನು ಭಾಗದಲ್ಲಿ ಚಳಿ ಅಥವಾ ನಡುಕ, ವಾಂತಿ ಅಥವಾ ಅಸ್ವಸ್ಥತೆ ,ಕಣ್ಣು ಕೆಂಪಾಗುವುದು,ದೌರ್ಬಲ್ಯ ಮತ್ತು ದೇಹ ಸೊರಗು ,ಹೊಟ್ಟೆ ನೋವು ,ಗಂಭೀರ ಲಕ್ಷಣಗಳು ಮೂತ್ರಪಿಂಡ ಸಮಸ್ಯೆ (ಕಿಡ್ನಿ ಫೇಲ್ಯರ್)ಯಕೃತ್ ಹಾನಿಯಿಂದ ಕಾಮಳೆ, ಉಸಿರಾಟದ ತೊಂದರೆ ಅಥವಾ ಶ್ವಾಸಕೋಶ ಸಮಸ್ಯೆಗಳು ಮೆದುಳಿನ ಸೋಂಕು (ಮೆನಿಂಜೈಟಿಸ್)ಒಳರಕ್ತಸ್ರಾವ

ನೆರೆ ನೀರು ಅಥವಾ ಕಲುಷಿತ ನೀರಿನಲ್ಲಿ ಬರಿಗಾಲಿನಲ್ಲಿ ನಡೆಯುವುದನ್ನು ತಪ್ಪಿಸಬೇಕು.ಕೃಷಿ ಕೆಲಸ ಅಥವಾ ಕಸ ವಿಲೇವಾರಿ ಮಾಡುವಾಗ ಬೂಟು, ಕೈಗವಸು ಧರಿಸಬೇಕು.
ಕಲುಷಿತ ನೀರಿನ ಸಂಪರ್ಕದ ನಂತರ ಕೈ ಕಾಲುಗಳನ್ನು ಚೆನ್ನಾಗಿ ತೊಳೆಯಬೇಕು.ಗಾಯ ಅಥವಾ ಕತ್ತರಿದ ಜಾಗಗಳನ್ನು ಮುಚ್ಚಿಕೊಂಡಿರಬೇಕು.ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ ಇಲಿಗಳ ನಿಯಂತ್ರಣ ಮಾಡಬೇಕು.
ಶುದ್ಧವಾದ ನೀರನ್ನೇ ಕುಡಿಯಬೇಕು.ಕಲುಷಿತ ನೀರಿನ ಸಂಪರ್ಕದ ನಂತರ ಜ್ವರ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ರೋಗದ ಈ ಎಲ್ಲಾ ಲಕ್ಷಣಗಳ ಹೊರತಾಗಿಯೂ ಸರಿಯಾದ ನಿರ್ಧಾರಕ್ಕೆ ಲ್ಯಾಬ್ ಪರೀಕ್ಷೆಗಳು ಅಗತ್ಯ. ಐಜಿಎಂ ಎಲಿಸಾ ಪರೀಕ್ಷೆ ಮೂಲಕ ಆರಂಭಿಕ ತಪಾಸಣೆ ನಡೆಸಲಾಗುತ್ತದೆ. ಮೈಕ್ರೋಸ್ಕೋಪಿಕ್ ಅಗ್ಗ್ಲುಟಿನೇಶನ್ ಟೆಸ್ಟ್ ಮುಖ್ಯ ಪರೀಕ್ಷೆಯಾಗಿದ್ದು, ವಿಶೇಷ ಪ್ರಯೋಗಾಲಯಗಳಲ್ಲಿ ನಡೆಸಲಾಗುತ್ತದೆ. ಆರಂಭಿಕ ಹಂತದಲ್ಲಿ ಪಿಸಿಆರ್ ಪರೀಕ್ಷೆಯಿಂದ ಬ್ಯಾಕ್ಟೀರಿಯಾ ಡಿಎನ್‌ಎ ಪತ್ತೆ ಮಾಡಬಹುದು. ಚಿಕಿತ್ಸೆ ವಿಳಂಬವಾದರೆ ಈ ಸೋಂಕು ಪ್ರಾಣಾಪಾಯಕ್ಕೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

Related Posts

ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!

  ತಾಯಿಯ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಒಬ್ಬ ಮಹಿಳೆ ತಾಯಿ ಹಾಗೂ ತಂದೆ ಎರಡು ಆಗಿ ಮಕ್ಕಳಿಗೆ ಭದ್ರ ಭವಿಷ್ಯ ಕಟ್ಟಿಕೊಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆಯೇ ಅನಿಸಬಹುದು. ಇದೀಗ ತನ್ನ ಪುಟ್ಟ ಪ್ರಪಂಚವಾಗಿರುವ ಮಗಳ ಭವಿಷ್ಯಕ್ಕಾಗಿ…

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ!

  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್​ಗಳು ಬ್ಲ್ಯಾಕ್​​ ಮಾರ್ಕೆಟ್​​ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ…

You Missed

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ!

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ!

ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!

ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ!

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ!

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.