ಧರ್ಮಸ್ಥಳದ ವಿಷಯದಲ್ಲಿ ಕೇಂದ್ರದ ನಡೆ ಏನು ? ಸಂದರ್ಭ ಬಂದಾಗ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ!

ಧರ್ಮಸ್ಥಳದ ಅಪಪ್ರಚಾರದ ವಿಷಯದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ವಚನಾನಂದ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ ಭೇಟಿಯಾದ ಮಠಾಧೀಶರ ನಿಯೋಗ ಧರ್ಮಸ್ಥಳ ಅಪಪ್ರಚಾರದ ತನಿಖೆಯನ್ನು ಎನ್‌ಐಎಗೆ ವಹಿಸಲು ಮನವಿ ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ ಧರ್ಮಸ್ಥಳದಲ್ಲಿ ಬುರುಡೆ ಗ್ಯಾಂಗ್‌ನಿಂದ ಅಪಪ್ರಚಾರ ವಿಚಾರವಾಗಿ ರಾಜ್ಯದ ವಿವಿಧ ಮಠಾಧೀಶರು ದೆಹಲಿಗೆ ತೆರಳಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಠಾಧೀಶರ ನಿಯೋಗ ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿಗಳ ನೇತೃತ್ವದ ವಿವಿಧ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯದ ಎಸ್‌ಐಟಿಯಿಂದ ಕೇಂದ್ರದ ಎನ್ಐಎಗೆ ವರ್ಗಾಯಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸ್ವಾಮೀಜಿಗಳ ನಿಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನೀವೇನು ಆತಂಕಕ್ಕೆ ಒಳಗಾಗಬೇಡಿ. ನಾವು ಧರ್ಮಸ್ಥಳದ ಪ್ರಕರಣವನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯ ಸರ್ಕಾರ ಪ್ರಕರಣ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದು ಗೊತ್ತಿದೆ. ಎಸ್‌ಐಟಿ ತನಿಖೆಯನ್ನು ಯಾವ ಮಾರ್ಗದಲ್ಲಿ ಕೊಂಡ್ಯೊಯ್ಯುತ್ತಿದೆ ಎಂಬುದರ ಪಿನ್ ಟು‌ ಪಿನ್ ಮಾಹಿತಿ ನಮಗಿದೆ. ಧರ್ಮಸ್ಥಳ ವಿಚಾರದಲ್ಲಿ ನಾವಿದ್ದೇವೆ. ಯಾವಾಗ ಸಂದರ್ಭ ಎದುರಾಗುತ್ತೋ ಆಗ ಖಂಡಿತಾ ನಾವು‌ ಪ್ರವೇಶ ಮಾಡಿಯೇ ತೀರುತ್ತೇವೆ. ನೀವುಗಳು ನೆಮ್ಮದಿಯಿಂದ ಇರಿ. ಧರ್ಮಸ್ಥಳಕ್ಕೆ ಒಂದೇ ಒಂದು ಹುಲ್ಲುಕಡ್ಡಿಯಷ್ಟು ತೊಂದರೆಯಾಗದಂತೆ ಹಿಂದೂಗಳ ಪವಿತ್ರ ಸ್ಥಳವಾಗಿ ಶಾಶ್ವತವಾಗಿ ಇರುವ ಹಾಗೇ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದು ಅಮಿತ್ ಶಾ ಮಠಾಧೀಶರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ನಾವು ಅಂದರೆ ಕೇಂದ್ರ ಸರ್ಕಾರ ಧರ್ಮಸ್ಥಳದ ಪರವಾಗಿದ್ದೇವೆ. ಒಂದೇ ಒಂದು ಕೂದಲು ಅಪಕೀರ್ತಿ ಈ ಸ್ಥಳಕ್ಕೆ ಬಾರದ ರೀತಿ ನಾವು ನೋಡಿಕೊಳ್ಳುತ್ತೇವೆ. ಧರ್ಮಸ್ಥಳದ ಪರಂಪರೆಯ ಬಗ್ಗೆ ನಮಗೆ ಮಾಹಿತಿಯಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನೂ ಇದೇ ಸ್ವಾಮೀಜಿಗಳ ನಿಯೋಗವು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಪತ್ರ ಸಲ್ಲಿಸಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರದ ಎಸ್‌ಐಟಿಯಿಂದ ಕೇಂದ್ರ ಸರ್ಕಾರದಡಿ ಇರುವ ಎನ್‌ಐಎ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದೆ.

Related Posts

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!