ಧೋನಿಯ 15 ವರ್ಷಗಳ ದಾಖಲೆ ಮುರಿದ ರಿಂಕು ಸಿಂಗ್

IPL 2026 LSG vs KKR: ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್​ಗಳಲ್ಲಿ 155 ರನ್ ಬಾರಿಸಿ ಪಂದ್ಯ ಟೈ ಗೊಳಿಸಿದ್ದರು. ಬಳಿಕ ನಡೆದ ಸೂಪರ್ ಓವರ್​ನಲ್ಲಿ ಕೆಕೆಆರ್ ತಂಡ ಜಯ ಸಾಧಿಸಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಿಂಕು ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 51 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 83 ರನ್ ಬಾರಿಸಿದರು.

ಈ 83 ರನ್​ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ 6ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ರಿಂಕು ಸಿಂಗ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.
2011 ರ ಐಪಿಎಲ್​ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಮಹೇಂದ್ರ ಸಿಂಗ್ ಧೋನಿ ಅಜೇಯ 70 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಆರನೇ ಕ್ರಮಾಂಕದಲ್ಲಿ ಅತ್ಯಧಿಕ ವೈಯುಕ್ತಿಕ ಸ್ಕೋರ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು
ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 83 ರನ್ ಬಾರಿಸುವ ಮೂಲಕ ರಿಂಕು ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ 15 ವರ್ಷಗಳ ಹಿಂದೆ ಮಹೇಂದ್ರ ಸಿಂಗ್ ಧೋನಿ ಬರೆದಿದ್ದ ದಾಖಲೆಯನ್ನು ರಿಂಕು ಅಳಿಸಿ ಹಾಕಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !