ಸ್ಮೃತಿ ಮಂದಾನಗೆ ಮೋಸ ಮಾಡಿಬಿಟ್ರಾ ಪಾಲಶ್ ಮುಚ್ಚಲ್ ? ಮದುವೆ ನಿಂತ ಹಿಂದಿನ ಅಸಲಿ ರಹಸ್ಯ ಏನು ..!

ಟೀಂ ಇಂಡಿಯಾದ ಆಟಗಾರ್ತಿ ಸ್ಮೃತಿ ಮಂದಾನರ ಮದುವೆ ತಾತ್ಕಾಲಿಕವಾಗಿ ಮುಂದೂಡಿಕೆ ಆಗಿದೆ. ಸ್ಮೃತಿ ತಂದೆ ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದೇ ಮದುವೆ ಮುಂದೂಡಿಕೆಗೆ ಕಾರಣ ಎನ್ನಲಾಗ್ತಿತ್ತು. ಆದ್ರೀಗ ಇದರ ಹಿಂದೆ ಬೇರೆಯದ್ದೇ ಕಾರಣ ಇದೆ ಅನ್ನೋ ಚರ್ಚೆ ಶುರುವಾಗಿದೆ.

ಸ್ಮೃತಿ ಮಂದಾನ.. ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್​​ ಬ್ಯಾಟರ್​​.. ಬ್ಯೂಟಿ ಕ್ವೀನ್​​.. ಅಷ್ಟೇ ಅಲ್ಲ ಲಾಯಲ್​​ ಆರ್​​ಸಿಬಿ ವುಮೆನ್ಸ್​​ ತಂಡದ ಕ್ಯಾಪ್ಟನ್​​.. ಎಲ್ಲವೂ ಸರಿಯಾಗಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ಸ್ಮೃತಿ ಮಂದಾನ.. ತಮ್ಮ ಬಹುವರ್ಷಗಳ ಪ್ರಿಯಕರನ ಕೈ ಹಿಡಿದು.. ಜೀವನದ ಹೊಸ ಇನ್ನಿಂಗ್ಸ್​​ ಅನ್ನು ಆರಂಭಿಸಬೇಕಿತ್ತು.. ಆದ್ರೆ ಹಸೆಮಣೆ ಏರಬೇಕಿದ್ದ ದಿನ ಸ್ಮೃತಿ ತಂದೆ ಹೃದಾಯಾಘಾತದಿಂದ ಆಸ್ಪತ್ರೆ ಸೇರಿದ ಕಾರಣ, ಮದುವೆ ಮುಂದೂಡಿಕೆ ಆಗಿತ್ತು.. ಆದ್ರೆ ಮದುವೆ ಏಕಾಏಕಿ ಮುಂದೂಡಿಕೆ ಆಗಿದ್ದಕ್ಕೆ ಬೇರೆಯದ್ದೇ ಕಾರಣ ಹರಿದಾಡತೊಡಗಿದೆ.

ಸ್ಮೃತಿ ಮಂದಾನ ಹಳದಿ ಶಾಸ್ತ್ರ.. ಸಂಗೀತ ಕಾರ್ಯಕ್ರಮದಲ್ಲಿ ಭಾವಿ ಪತಿ ಮುಚ್ಚಲ್​​ ಜೊತೆ ಬಿಂದಾಸ್​ ಆಗಿ ಪೋಸ್​​ ಕೊಟ್ಟಿದ್ರು. ನಾಚಿಕೆ ಸ್ವಭಾವದ ಸ್ಮೃತಿ.. ಸಂಗೀತಾ ಕಾರ್ಯಕ್ರಮದಲ್ಲಂತೂ.. ಸಂಕೋಚ ಎಲ್ಲವನ್ನು ಬದಿಗಿಟ್ಟು, ವೇದಿಕೆ ಮೇಲೆ ಮುಚ್ಚಿಲ್​​ ಜೊತೆ ಕುಣಿದು ಕುಪ್ಪಳಿಸಿದ್ರು. ನವೆಂಬರ್​ 23 ಭಾನುವಾರಂದು ಹಸೆಮಣೆ ಏರಲು ಸಜ್ಜಾಗಿದ್ದ ಸ್ಮೃತಿಗೆ ಶಾಕ್​ ಆಗಿತ್ತು. ಮದುವೆ ದಿನವೇ ಸ್ಮೃತಿ ಮಂದಾನ ತಂದೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ ಕಾರಣ, ಮದುವೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಕುಟುಂಬಗಳು ಹೇಳಿಕೊಂಡಿದ್ವು.

ಆದ್ರೆ ಮಂಗಳವಾರ ಸ್ಮೃತಿ ಮಂದಾನ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಮುಚ್ಚಲ್​ ಜೊತೆಗಿನ ಎಂಗೇಜ್​​​ಮೆಂಟ್​ ಸೇರಿದಂತೆ ಮದುವೆ ಶಾಸ್ತ್ರದ ವಿಡಿಯೋ ಫೋಟೋಗಳನ್ನು ಡಿಲೀಟ್​ ಮಾಡಿದ್ದು. ಸಮ್​ಥಿಂಗ್​​ ಫಿಶಿಂಗ್​​ ಅನ್ಸಿತ್ತು. ಆದ್ರೀಗ ಸ್ಮೃತಿ ಮಂದಾನರ ಭಾವಿ ಪತಿಯ ಅಕ್ರಮ ಸಂಬಂಧವೇ ಮದುವೆ ಪೋಸ್ಟ್​ಪೋನ್​​ಗೆ ಕಾರಣ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಪಲಾಶ್‌ಗೆ ಬೇರೆ ಸಂಬಂಧವಿದೆ ಎಂದು ಹೇಳಲಾಗುವ ಯುವತಿಯೊಂದಿಗಿನ ಚಾಟ್‌ನ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಭಾರೀ ಸದ್ದು ಮಾಡ್ತಿದೆ. ಇದರಲ್ಲಿ ಯುವತಿಯನ್ನು ಮ್ಯಾರಿಯಟ್ ಹೋಟೆಲ್‌ನ ಪೂಲ್‌ನಲ್ಲಿ ಒಟ್ಟಿಗೆ ಈಜಲು ಆಹ್ವಾನಿಸುವುದು. ಸ್ಮೃತಿ ಜೊತೆಗಿನ ಸಂಬಂಧದ ಬಗ್ಗೆ ಪ್ರಶ್ನೆಗಳು ಮತ್ತು ಪಲಾಶ್ ಅವರ ಉತ್ತರಗಳು ವಾಟ್ಸಾಪ್ ಚಾಟ್‌ನಲ್ಲಿವೆ. ಆದರೆ, ಇದು ನಿಜವಾಗಿಯೂ ಪಲಾಶ್ ಜೊತೆಗಿನ ಸಂಭಾಷಣೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ಎರಡೂ ಕುಟುಂಬಗಳು ಯಾವುದೇ ಸ್ಪಷ್ಟನೆ ನೀಡಿಲಿಲ್ಲ.

ಶೀಘ್ರವೇ ಮದುವೆ ನಡೆಯಲಿದೆ ಎಂದ ಮುಚ್ಚಲ್​ ತಾಯಿ
ಸ್ಮೃತಿ ಮತ್ತು ಮುಚ್ಚಲ್​ ಮದುವೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ ಮುಂದೂಡಲ್ಪಟ್ಟ ಮದುವೆ ಯಾವಾಗ ನಡೆಯಲಿದೆ ಎಂಬುದರ ಕುರಿತು ಪಲಾಶ್ ಮುಚ್ಚಲ್ ಅವರ ತಾಯಿ ಅಮಿತಾ ಬಹುದೊಡ್ಡ ಅಪ್ಡೇಟ್ ನೀಡಿದ್ದಾರೆ. ಜೊತೆಗೆ ಮುಚ್ಚಲ್​ನನ್ನು ಆಸ್ಪತ್ರೆಗೆ ದಾಖಲಿಸಿದ ಕಾರಣವನ್ನು ಬಹಿರಂಗಪಡಿಸಿದ್ದಾರೆ.

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!