ಸ್ಮೃತಿ ಮಂದಾನಗೆ ಮೋಸ ಮಾಡಿಬಿಟ್ರಾ ಪಾಲಶ್ ಮುಚ್ಚಲ್ ? ಮದುವೆ ನಿಂತ ಹಿಂದಿನ ಅಸಲಿ ರಹಸ್ಯ ಏನು ..!

ಟೀಂ ಇಂಡಿಯಾದ ಆಟಗಾರ್ತಿ ಸ್ಮೃತಿ ಮಂದಾನರ ಮದುವೆ ತಾತ್ಕಾಲಿಕವಾಗಿ ಮುಂದೂಡಿಕೆ ಆಗಿದೆ. ಸ್ಮೃತಿ ತಂದೆ ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದೇ ಮದುವೆ ಮುಂದೂಡಿಕೆಗೆ ಕಾರಣ ಎನ್ನಲಾಗ್ತಿತ್ತು. ಆದ್ರೀಗ ಇದರ ಹಿಂದೆ ಬೇರೆಯದ್ದೇ ಕಾರಣ ಇದೆ ಅನ್ನೋ ಚರ್ಚೆ ಶುರುವಾಗಿದೆ.

ಸ್ಮೃತಿ ಮಂದಾನ.. ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್​​ ಬ್ಯಾಟರ್​​.. ಬ್ಯೂಟಿ ಕ್ವೀನ್​​.. ಅಷ್ಟೇ ಅಲ್ಲ ಲಾಯಲ್​​ ಆರ್​​ಸಿಬಿ ವುಮೆನ್ಸ್​​ ತಂಡದ ಕ್ಯಾಪ್ಟನ್​​.. ಎಲ್ಲವೂ ಸರಿಯಾಗಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ಸ್ಮೃತಿ ಮಂದಾನ.. ತಮ್ಮ ಬಹುವರ್ಷಗಳ ಪ್ರಿಯಕರನ ಕೈ ಹಿಡಿದು.. ಜೀವನದ ಹೊಸ ಇನ್ನಿಂಗ್ಸ್​​ ಅನ್ನು ಆರಂಭಿಸಬೇಕಿತ್ತು.. ಆದ್ರೆ ಹಸೆಮಣೆ ಏರಬೇಕಿದ್ದ ದಿನ ಸ್ಮೃತಿ ತಂದೆ ಹೃದಾಯಾಘಾತದಿಂದ ಆಸ್ಪತ್ರೆ ಸೇರಿದ ಕಾರಣ, ಮದುವೆ ಮುಂದೂಡಿಕೆ ಆಗಿತ್ತು.. ಆದ್ರೆ ಮದುವೆ ಏಕಾಏಕಿ ಮುಂದೂಡಿಕೆ ಆಗಿದ್ದಕ್ಕೆ ಬೇರೆಯದ್ದೇ ಕಾರಣ ಹರಿದಾಡತೊಡಗಿದೆ.

ಸ್ಮೃತಿ ಮಂದಾನ ಹಳದಿ ಶಾಸ್ತ್ರ.. ಸಂಗೀತ ಕಾರ್ಯಕ್ರಮದಲ್ಲಿ ಭಾವಿ ಪತಿ ಮುಚ್ಚಲ್​​ ಜೊತೆ ಬಿಂದಾಸ್​ ಆಗಿ ಪೋಸ್​​ ಕೊಟ್ಟಿದ್ರು. ನಾಚಿಕೆ ಸ್ವಭಾವದ ಸ್ಮೃತಿ.. ಸಂಗೀತಾ ಕಾರ್ಯಕ್ರಮದಲ್ಲಂತೂ.. ಸಂಕೋಚ ಎಲ್ಲವನ್ನು ಬದಿಗಿಟ್ಟು, ವೇದಿಕೆ ಮೇಲೆ ಮುಚ್ಚಿಲ್​​ ಜೊತೆ ಕುಣಿದು ಕುಪ್ಪಳಿಸಿದ್ರು. ನವೆಂಬರ್​ 23 ಭಾನುವಾರಂದು ಹಸೆಮಣೆ ಏರಲು ಸಜ್ಜಾಗಿದ್ದ ಸ್ಮೃತಿಗೆ ಶಾಕ್​ ಆಗಿತ್ತು. ಮದುವೆ ದಿನವೇ ಸ್ಮೃತಿ ಮಂದಾನ ತಂದೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ ಕಾರಣ, ಮದುವೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಕುಟುಂಬಗಳು ಹೇಳಿಕೊಂಡಿದ್ವು.

ಆದ್ರೆ ಮಂಗಳವಾರ ಸ್ಮೃತಿ ಮಂದಾನ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಮುಚ್ಚಲ್​ ಜೊತೆಗಿನ ಎಂಗೇಜ್​​​ಮೆಂಟ್​ ಸೇರಿದಂತೆ ಮದುವೆ ಶಾಸ್ತ್ರದ ವಿಡಿಯೋ ಫೋಟೋಗಳನ್ನು ಡಿಲೀಟ್​ ಮಾಡಿದ್ದು. ಸಮ್​ಥಿಂಗ್​​ ಫಿಶಿಂಗ್​​ ಅನ್ಸಿತ್ತು. ಆದ್ರೀಗ ಸ್ಮೃತಿ ಮಂದಾನರ ಭಾವಿ ಪತಿಯ ಅಕ್ರಮ ಸಂಬಂಧವೇ ಮದುವೆ ಪೋಸ್ಟ್​ಪೋನ್​​ಗೆ ಕಾರಣ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಪಲಾಶ್‌ಗೆ ಬೇರೆ ಸಂಬಂಧವಿದೆ ಎಂದು ಹೇಳಲಾಗುವ ಯುವತಿಯೊಂದಿಗಿನ ಚಾಟ್‌ನ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಭಾರೀ ಸದ್ದು ಮಾಡ್ತಿದೆ. ಇದರಲ್ಲಿ ಯುವತಿಯನ್ನು ಮ್ಯಾರಿಯಟ್ ಹೋಟೆಲ್‌ನ ಪೂಲ್‌ನಲ್ಲಿ ಒಟ್ಟಿಗೆ ಈಜಲು ಆಹ್ವಾನಿಸುವುದು. ಸ್ಮೃತಿ ಜೊತೆಗಿನ ಸಂಬಂಧದ ಬಗ್ಗೆ ಪ್ರಶ್ನೆಗಳು ಮತ್ತು ಪಲಾಶ್ ಅವರ ಉತ್ತರಗಳು ವಾಟ್ಸಾಪ್ ಚಾಟ್‌ನಲ್ಲಿವೆ. ಆದರೆ, ಇದು ನಿಜವಾಗಿಯೂ ಪಲಾಶ್ ಜೊತೆಗಿನ ಸಂಭಾಷಣೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ಎರಡೂ ಕುಟುಂಬಗಳು ಯಾವುದೇ ಸ್ಪಷ್ಟನೆ ನೀಡಿಲಿಲ್ಲ.

ಶೀಘ್ರವೇ ಮದುವೆ ನಡೆಯಲಿದೆ ಎಂದ ಮುಚ್ಚಲ್​ ತಾಯಿ
ಸ್ಮೃತಿ ಮತ್ತು ಮುಚ್ಚಲ್​ ಮದುವೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ ಮುಂದೂಡಲ್ಪಟ್ಟ ಮದುವೆ ಯಾವಾಗ ನಡೆಯಲಿದೆ ಎಂಬುದರ ಕುರಿತು ಪಲಾಶ್ ಮುಚ್ಚಲ್ ಅವರ ತಾಯಿ ಅಮಿತಾ ಬಹುದೊಡ್ಡ ಅಪ್ಡೇಟ್ ನೀಡಿದ್ದಾರೆ. ಜೊತೆಗೆ ಮುಚ್ಚಲ್​ನನ್ನು ಆಸ್ಪತ್ರೆಗೆ ದಾಖಲಿಸಿದ ಕಾರಣವನ್ನು ಬಹಿರಂಗಪಡಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು