‘ಕೂಲಿ’ ಸಿನಿಮಾದಲ್ಲಿ ಡಿಂಪಲ್​​ ಕ್ವೀನ್​​.. ರಜಿನಿ ಜತೆ​ ಫೋಟೋ ಶೇರ್ ಮಾಡಿದ ರಚಿತ

ಆಗಸ್ಟ್​ 14 ಸೂಪರ್​ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿತ್ತು. ಸೂಪರ್​ ಸ್ಟಾರ್​ನನ್ನು ಮತ್ತೆ ತೆರೆ ಮೇಲೆ ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ.
ಆಗಸ್ಟ್​ 14 ಸೂಪರ್​ ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿತ್ತು.

ಅಷ್ಟೇ ಅಲ್ಲದೇ ಕೂಲಿ ಸಿನಿಮಾದಲ್ಲಿ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ನಟಿಸಿದ್ದು ಎಲ್ಲರಿಗೂ ಖುಷಿ ಕೊಟ್ಟಿದೆ. ಹೌದು, ಸರ್​ಪ್ರೈಸ್​ ಎಂಬಂತೆ ಕೂಲಿ ಸಿನಿಮಾದಲ್ಲಿ ಕಲ್ಯಾಣಿ ಎಂಬ ಪಾತ್ರದಲ್ಲಿ ನಟಿ ರಚಿತಾ ರಾಮ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಮೊದ ಮೊದಲು ಪಾಪದ ಹುಡುಗಿಯಾಗಿ ಕಾಣಿಸಿಕೊಂಡ ರಚ್ಚು ತದನಂತರ ರೆಬೆಲ್​ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಇದೇ ಮೊದಲು ಬಾರಿಗೆ ರಚಿತಾ ರಾಮ್​ ಅವರ ನಟನೆಗೆ ಅಭಿಮಾನಿಗಳು ಫುಲ್​ ಮಾರ್ಕ್ಸ್​ ಕೊಡುತ್ತಿದ್ದಾರೆ.
ಸಿನಿಮಾ ರಿಲೀಸ್​ ಆಗಿರೋ ಖುಷಿಯಲ್ಲಿ ನಟಿ ರಚಿತಾ ರಾಮ್​ ಸೂಪರ್ ಸ್ಟಾರ್​ ಜೊತೆಗೀನ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರಜಿನಿ ಜೊತೆಗೆ ಅಪ್ಪಿಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಆ ಫೋಟೋ ಜೊತೆಗೆ ‘‘ಈ ಫೋಟೋ ನನ್ನ ಗ್ಯಾಲರಿಯಲ್ಲಿ ಅಡಗಿತ್ತು. ಇದನ್ನೂ ಹಂಚಿಕೊಳ್ಳಲು ಸೂಕ್ತ ಕ್ಷಣಕ್ಕಾಗಿ ಕಾಯುತ್ತಿದ್ದೆ ರಜಿನಿ ಸರ್, ಲವ್​ ಯೂ’’ ಎಂದು ಬರೆದುಕೊಂಡಿದ್ದಾರೆ.

ಇನ್ನೂ, ಇದೇ ಫೋಟೋ ಜೊತೆಗೆ ರಚಿತಾ ರಾಮ್​ ಅಭಿನಯದ ಬಗ್ಗೆ ಅಭಿಮಾನಿಗಳು ಕಾಮೆಂಟ್ಸ್​ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕೂಲಿಯಲ್ಲಿ ಅದ್ಭುತ ಅಭಿನಯ, ನೀವು ಹಾಗೇ ಅಭಿನಯಿಸುತ್ತೀರಾ ಅಂತ ಎಂದಿಗೂ ನಿರೀಕ್ಷಿಸಿರಲಿಲ್ಲ ಮೇಡಂ, ಅಳುವುವವರನ್ನು ಯಾವತ್ತು ನಂಬಬಾರದು ಅಂತ ನಟಿಯ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಇನ್ನೂ, 2013ರಲ್ಲಿ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಚಿತಾ ರಾಮ್‌ ಈಗ ಕನ್ನಡದ ಬಹು ಬೇಡಿಕೆಯ ನಟಿ ಎನಿಸಿಕೊಂಡರು. 2022ರಲ್ಲಿ ಟಾಲಿವುಡ್‌ಗೆ ಪ್ರವೇಶಿಸಿದ್ದ ಅವರು ಈ ವರ್ಷ ಕೂಲಿ ಸಿನಿಮಾ ಮೂಲಕ ಕಾಲಿವುಡ್‌ಗೂ ಪದಾರ್ಪಣೆ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!