‘ಕೂಲಿ’ ಸಿನಿಮಾದಲ್ಲಿ ಡಿಂಪಲ್​​ ಕ್ವೀನ್​​.. ರಜಿನಿ ಜತೆ​ ಫೋಟೋ ಶೇರ್ ಮಾಡಿದ ರಚಿತ

ಆಗಸ್ಟ್​ 14 ಸೂಪರ್​ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿತ್ತು. ಸೂಪರ್​ ಸ್ಟಾರ್​ನನ್ನು ಮತ್ತೆ ತೆರೆ ಮೇಲೆ ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ.
ಆಗಸ್ಟ್​ 14 ಸೂಪರ್​ ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿತ್ತು.

ಅಷ್ಟೇ ಅಲ್ಲದೇ ಕೂಲಿ ಸಿನಿಮಾದಲ್ಲಿ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ನಟಿಸಿದ್ದು ಎಲ್ಲರಿಗೂ ಖುಷಿ ಕೊಟ್ಟಿದೆ. ಹೌದು, ಸರ್​ಪ್ರೈಸ್​ ಎಂಬಂತೆ ಕೂಲಿ ಸಿನಿಮಾದಲ್ಲಿ ಕಲ್ಯಾಣಿ ಎಂಬ ಪಾತ್ರದಲ್ಲಿ ನಟಿ ರಚಿತಾ ರಾಮ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಮೊದ ಮೊದಲು ಪಾಪದ ಹುಡುಗಿಯಾಗಿ ಕಾಣಿಸಿಕೊಂಡ ರಚ್ಚು ತದನಂತರ ರೆಬೆಲ್​ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಇದೇ ಮೊದಲು ಬಾರಿಗೆ ರಚಿತಾ ರಾಮ್​ ಅವರ ನಟನೆಗೆ ಅಭಿಮಾನಿಗಳು ಫುಲ್​ ಮಾರ್ಕ್ಸ್​ ಕೊಡುತ್ತಿದ್ದಾರೆ.
ಸಿನಿಮಾ ರಿಲೀಸ್​ ಆಗಿರೋ ಖುಷಿಯಲ್ಲಿ ನಟಿ ರಚಿತಾ ರಾಮ್​ ಸೂಪರ್ ಸ್ಟಾರ್​ ಜೊತೆಗೀನ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರಜಿನಿ ಜೊತೆಗೆ ಅಪ್ಪಿಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಆ ಫೋಟೋ ಜೊತೆಗೆ ‘‘ಈ ಫೋಟೋ ನನ್ನ ಗ್ಯಾಲರಿಯಲ್ಲಿ ಅಡಗಿತ್ತು. ಇದನ್ನೂ ಹಂಚಿಕೊಳ್ಳಲು ಸೂಕ್ತ ಕ್ಷಣಕ್ಕಾಗಿ ಕಾಯುತ್ತಿದ್ದೆ ರಜಿನಿ ಸರ್, ಲವ್​ ಯೂ’’ ಎಂದು ಬರೆದುಕೊಂಡಿದ್ದಾರೆ.

ಇನ್ನೂ, ಇದೇ ಫೋಟೋ ಜೊತೆಗೆ ರಚಿತಾ ರಾಮ್​ ಅಭಿನಯದ ಬಗ್ಗೆ ಅಭಿಮಾನಿಗಳು ಕಾಮೆಂಟ್ಸ್​ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕೂಲಿಯಲ್ಲಿ ಅದ್ಭುತ ಅಭಿನಯ, ನೀವು ಹಾಗೇ ಅಭಿನಯಿಸುತ್ತೀರಾ ಅಂತ ಎಂದಿಗೂ ನಿರೀಕ್ಷಿಸಿರಲಿಲ್ಲ ಮೇಡಂ, ಅಳುವುವವರನ್ನು ಯಾವತ್ತು ನಂಬಬಾರದು ಅಂತ ನಟಿಯ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಇನ್ನೂ, 2013ರಲ್ಲಿ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಚಿತಾ ರಾಮ್‌ ಈಗ ಕನ್ನಡದ ಬಹು ಬೇಡಿಕೆಯ ನಟಿ ಎನಿಸಿಕೊಂಡರು. 2022ರಲ್ಲಿ ಟಾಲಿವುಡ್‌ಗೆ ಪ್ರವೇಶಿಸಿದ್ದ ಅವರು ಈ ವರ್ಷ ಕೂಲಿ ಸಿನಿಮಾ ಮೂಲಕ ಕಾಲಿವುಡ್‌ಗೂ ಪದಾರ್ಪಣೆ ಮಾಡಿದ್ದಾರೆ.

Related Posts

ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು