RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | ಆರ್‌ಸಿಬಿ ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | RCB ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ ಇನಿಂಗ್ಸ್​ ಅನ್ನು ಆರ್​ಸಿಬಿಯೊಂದಿಗೆ ಆರಂಭಿಸುತ್ತಿರುವುದು ವಿಶೇಷ.

ಈ ಬಾರಿಯ IPL​ನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ.

ಐಪಿಎಲ್‌ 2024 ಟೂರ್ನಿಯಲ್ಲಿ ಉತ್ತಮ ಪ್ರದರ್ಸನ ನೀಡಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕ್ವಾಲಿಫೈಯರ್‌ 2 ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ನಿರಾಶೆ ಅನುಭವಿಸಿ ಸ್ಪರ್ಧೆಯಿಂದ ಹೊರಬಿದ್ದಿತ್ತು. ಇದರ ಬೆನ್ನಲ್ಲೇ 39 ವರ್ಷದ ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ದಿನೇಶ್‌ ಕಾರ್ತಿಕ್‌ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಸನ್ಯಾಸತ್ವ ತೆಗೆದುಕೊಂಡರು. ಅಂದಹಾಗೆ ಕ್ರಿಕೆಟ್‌ ಕಾಮೆಂಟರಿಯಲ್ಲಿ ಅಪಾರ ಆಸಕ್ತಿ ಹೊಂದಿರುವ ಡಿ.ಕೆ ಅವರನ್ನು ಮುಂದಿನ ದಿನಗಳಲ್ಲಿ ಕಾಮೆಂಟೇಟರ್‌ ಆಗಿ ಕಾಣಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ತಮಿಳುನಾಡು ಮೂಲದ ಸ್ಟಾರ್‌ ಕ್ರಿಕೆಟರ್‌ ಇದೀಗ ಕೋಚಿಂಗ್‌ ವೃತ್ತಿಬದುಕು ಶುರು ಮಾಡಲು ಮುಂದಾಗಿದ್ದಾರೆ.

  • Related Posts

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

      ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

    ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

    ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!