ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಮಾತನಾಡಿರುವ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿ.ಕೆ.ಶಿವಕುಮಾರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಶ್ರಮಿಸಿದ್ದಾರೆ. ಅವರ ಈ ಪರಿಶ್ರಮಕ್ಕೆ ಹೈಕಮಾಂಡ್‌ನಿಂದ ಸೂಕ್ತ ಪ್ರತಿಫಲ ಸಿಗಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಮೇ 15ರಂದು ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವಿದ್ದು, ಅಷ್ಟರೊಳಗೆ ಅವರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವದಂತಿಗಳಿಗೆ ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

ಅಧಿಕಾರ ಹಂಚಿಕೆ ಒಪ್ಪಂದದ ಗೊಂದಲ:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಇಂತಹದೊಂದು ಒಪ್ಪಂದದ ಬಗ್ಗೆ ಎಲ್ಲರಲ್ಲೂ ಕುತೂಹಲವಿದೆ ಎಂದು ತಿಳಿಸಿದರು. ಒಪ್ಪಂದದ ಸ್ವರೂಪ ಮತ್ತು ಸಮಯದ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡುವ ಮೂಲಕ ಸದ್ಯ ಚಾಲ್ತಿಯಲ್ಲಿರುವ ಗೊಂದಲಗಳಿಗೆ ತೆರೆ ಎಳೆಯಬೇಕು. ಇದು ಕೇವಲ ನನ್ನೊಬ್ಬನ ಅಭಿಪ್ರಾಯವಲ್ಲ, ಪಕ್ಷದ ಎಲ್ಲರೂ ಇದನ್ನು ಬಯಸುತ್ತಿದ್ದಾರೆ ಎಂದು ಅವರು ಹೈಕಮಾಂಡ್ ಗಮನ ಸೆಳೆದಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ:
ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಕೂಡ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕು ಎಂಬುದು ನಮ್ಮ ನಿರೀಕ್ಷೆಯಾಗಿದೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡಿ ಫಲಿತಾಂಶವನ್ನು ದೇವರಿಗೆ ಬಿಡಬೇಕು. ಅದೇ ರೀತಿ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಂತಿಮವಾಗಿ ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಶಾಸಕ ರಂಗನಾಥ್ ಸ್ಪಷ್ಟಪಡಿಸಿದ್ದಾರೆ.

Related Posts

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 76ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಸೇರಿದಂತೆ ದೇಶದ ಹಲವು ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿಯವರ ಹುಟ್ಟುಹಬ್ಬದ ಅಂಗವಾಗಿ…

9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್ ಉಚಿತ ಮುಕ್ತಿ ರಥ ಕೊಡುಗೆ

ಮಿರ್ಲೆ: ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದಲ್ಲಿ ಮಿರ್ಲೆ ಸೇರಿದಂತೆ 9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್ ಉಚಿತ ಮುಕ್ತಿ ರಥವನ್ನು ಕೊಡುಗೆಯಾಗಿ ನೀಡಲಾಯಿತು. ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದಲ್ಲಿ ಕೊಡುಗೆಯಾಗಿ ನೀಡಲಾಯಿತು ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸಾರಾ ಮಹೇಶ್ 9 ಗ್ರಾಮಗಳ ಮುಖಂಡರುಗಳು,…

You Missed

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!

9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್ ಉಚಿತ ಮುಕ್ತಿ ರಥ ಕೊಡುಗೆ

9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್  ಉಚಿತ ಮುಕ್ತಿ ರಥ ಕೊಡುಗೆ

45 ವರ್ಷದ ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

45 ವರ್ಷದ  ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

UPI ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

UPI  ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ