ಡಿಕೆ ಸುರೇಶ್ ಜನ ಮೆಚ್ಚಿದ ನಾಯಕ ನಾನು ಅವರ ಹೆಂಡ್ತಿ.

ರಾಮನಗರ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.


ಆದರೆ ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನ ಪ್ರಶ್ನೆ ಮಾಡುತ್ತಾರೆ, ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ, ಜನರಿಗೆ ಸ್ಟೇಟಸ್ ಬೇಕು, ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹರಿ ಬಿಟ್ಟಿದ್ದಾರೆ. ಫೇಸ್ಬುಕ್ನಲ್ಲಿ PavitraDksuresh Dodalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ಮಹಿಳೆ, ಏ.8ರಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ.

https://www.facebook.com/share/r/1B8GuTeTkH/


ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸುರೇಶ್ ಅವರ ಪತ್ನಿ ಎಂದು ದುರುದ್ದೇಶದಿಂದ ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆ ಸಹ ದುರುಪಯೋಗಪಡಿಸಿ ಕೊಂಡಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಪ್ರದೀಪ್ ತಿಳಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!