ಡಿಕೆ ಸುರೇಶ್ ಜನ ಮೆಚ್ಚಿದ ನಾಯಕ ನಾನು ಅವರ ಹೆಂಡ್ತಿ.

ರಾಮನಗರ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.


ಆದರೆ ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನ ಪ್ರಶ್ನೆ ಮಾಡುತ್ತಾರೆ, ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ, ಜನರಿಗೆ ಸ್ಟೇಟಸ್ ಬೇಕು, ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹರಿ ಬಿಟ್ಟಿದ್ದಾರೆ. ಫೇಸ್ಬುಕ್ನಲ್ಲಿ PavitraDksuresh Dodalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ಮಹಿಳೆ, ಏ.8ರಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ.

https://www.facebook.com/share/r/1B8GuTeTkH/


ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸುರೇಶ್ ಅವರ ಪತ್ನಿ ಎಂದು ದುರುದ್ದೇಶದಿಂದ ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆ ಸಹ ದುರುಪಯೋಗಪಡಿಸಿ ಕೊಂಡಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ವಕೀಲ ಪ್ರದೀಪ್ ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು