ಪ್ರಜ್ವಲ್ ರೇವಣ್ಣಗೆ ದಿನಕ್ಕೆ ಎಷ್ಟು ಕೂಲಿ ಗೊತ್ತಾ? ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆ.

ರೇಪ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆಯಾಗಲಿದೆ. ಪ್ರಜ್ವಲ್ ವಿದ್ಯಾಭ್ಯಾಸದ ಮೇಲೂ ಕೆಲಸ ಹಂಚಿಕೆಯಾಗಬಹುದು. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಈಗ ದಿನಗೂಲಿ ಪಡೆಯಬೇಕಾಗಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣಗೆ ಜೈಲ್ಲಿ‌ನಲ್ಲಿ ಏನು ಕೆಲಸ ಕೊಡಬೇಕು ಎಂಬುದರ ಬಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲೇ ಪ್ರಜ್ವಲ್ ರೇವಣ್ಣಗೆ ಜೈಲ್ಲಿನಲ್ಲಿ ಕೆಲಸವನ್ನು ನೀಡಲಿದ್ದಾರೆ.
ಸದ್ಯ ಪ್ರಜ್ವಲ್ ವಿದ್ಯಾಭ್ಯಾಸ ಮೇಲೆ ಕೆಲಸ ನೀಡಲು ಚಿಂತನೆ ನಡೆದಿದೆ. ಅಪರಾಧಿ ಪ್ರಜ್ವಲ್ ಬಿ.ಇ. ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾರೆ.

 

 

ವ್ಯಾಸಂಗಕ್ಕೆ ಹೊಂದಿಕೊಳ್ಳುವ ಕೆಲಸ ನೀಡಲು ಜೈಲು ಅಧಿಕಾರಿಗಳ ಪ್ಲ್ಯಾನ್ ಮಾಡಿದ್ದಾರೆ. ಸಜಾಬಂಧಿ ಖೈದಿಗಳು ಕಡ್ಡಾಯವಾಗಿ ಜೈಲ್ಲಿ‌ನಲ್ಲಿರುವ ಯಾವುದಾದರೊಂದು ಕೆಲಸ ಮಾಡಬೇಕು. ಜೈಲಿನಲ್ಲಿ ಬೇಕರಿ, ತೋಟಗಾರಿಕೆ, ಗ್ರಂಥಾಲಯ ನಿರ್ವಹಣೆ, ಶಿಕ್ಷಣ, ಮಗ್ಗ, ಸಣ್ಣ ಪುಟ್ಟ ಕೈಗಾರಿಕೆ ಕೆಲಸ , ಅಡುಗೆ ಮನೆ ನಿರ್ವಹಣೆ, ಅಡ್ಮಿನಿಸ್ಟ್ರೇಶನ್ ನೋಡಿಕೊಳ್ಳುವುದು, ಸ್ಕಿಲ್ ಡೆವಲಪ್ಮೆಂಟ್ ಮುಂತಾದ ಕೆಲಸಗಳು ಇವೆ . ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ 615 ರೂಪಾಯಿ ಕೂಲಿ ನಿಗದಿಯಾಗಲಿದೆ.ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ. ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಸದ್ಯ ಸಜಾ ಖೈದಿಯಾಗಿರುವ ಪ್ರಜ್ವಲ್ ಯಾವ ಕೆಲಸ ಜೈಲಿನಲ್ಲಿ ಮಾಡ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!