ಪ್ರಜ್ವಲ್ ರೇವಣ್ಣಗೆ ದಿನಕ್ಕೆ ಎಷ್ಟು ಕೂಲಿ ಗೊತ್ತಾ? ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆ.

ರೇಪ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆಯಾಗಲಿದೆ. ಪ್ರಜ್ವಲ್ ವಿದ್ಯಾಭ್ಯಾಸದ ಮೇಲೂ ಕೆಲಸ ಹಂಚಿಕೆಯಾಗಬಹುದು. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಈಗ ದಿನಗೂಲಿ ಪಡೆಯಬೇಕಾಗಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣಗೆ ಜೈಲ್ಲಿ‌ನಲ್ಲಿ ಏನು ಕೆಲಸ ಕೊಡಬೇಕು ಎಂಬುದರ ಬಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲೇ ಪ್ರಜ್ವಲ್ ರೇವಣ್ಣಗೆ ಜೈಲ್ಲಿನಲ್ಲಿ ಕೆಲಸವನ್ನು ನೀಡಲಿದ್ದಾರೆ.
ಸದ್ಯ ಪ್ರಜ್ವಲ್ ವಿದ್ಯಾಭ್ಯಾಸ ಮೇಲೆ ಕೆಲಸ ನೀಡಲು ಚಿಂತನೆ ನಡೆದಿದೆ. ಅಪರಾಧಿ ಪ್ರಜ್ವಲ್ ಬಿ.ಇ. ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾರೆ.

 

 

ವ್ಯಾಸಂಗಕ್ಕೆ ಹೊಂದಿಕೊಳ್ಳುವ ಕೆಲಸ ನೀಡಲು ಜೈಲು ಅಧಿಕಾರಿಗಳ ಪ್ಲ್ಯಾನ್ ಮಾಡಿದ್ದಾರೆ. ಸಜಾಬಂಧಿ ಖೈದಿಗಳು ಕಡ್ಡಾಯವಾಗಿ ಜೈಲ್ಲಿ‌ನಲ್ಲಿರುವ ಯಾವುದಾದರೊಂದು ಕೆಲಸ ಮಾಡಬೇಕು. ಜೈಲಿನಲ್ಲಿ ಬೇಕರಿ, ತೋಟಗಾರಿಕೆ, ಗ್ರಂಥಾಲಯ ನಿರ್ವಹಣೆ, ಶಿಕ್ಷಣ, ಮಗ್ಗ, ಸಣ್ಣ ಪುಟ್ಟ ಕೈಗಾರಿಕೆ ಕೆಲಸ , ಅಡುಗೆ ಮನೆ ನಿರ್ವಹಣೆ, ಅಡ್ಮಿನಿಸ್ಟ್ರೇಶನ್ ನೋಡಿಕೊಳ್ಳುವುದು, ಸ್ಕಿಲ್ ಡೆವಲಪ್ಮೆಂಟ್ ಮುಂತಾದ ಕೆಲಸಗಳು ಇವೆ . ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ 615 ರೂಪಾಯಿ ಕೂಲಿ ನಿಗದಿಯಾಗಲಿದೆ.ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ. ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಸದ್ಯ ಸಜಾ ಖೈದಿಯಾಗಿರುವ ಪ್ರಜ್ವಲ್ ಯಾವ ಕೆಲಸ ಜೈಲಿನಲ್ಲಿ ಮಾಡ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!