ಪ್ರಜ್ವಲ್ ರೇವಣ್ಣಗೆ ದಿನಕ್ಕೆ ಎಷ್ಟು ಕೂಲಿ ಗೊತ್ತಾ? ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆ.

ರೇಪ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆಯಾಗಲಿದೆ. ಪ್ರಜ್ವಲ್ ವಿದ್ಯಾಭ್ಯಾಸದ ಮೇಲೂ ಕೆಲಸ ಹಂಚಿಕೆಯಾಗಬಹುದು. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಈಗ ದಿನಗೂಲಿ ಪಡೆಯಬೇಕಾಗಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣಗೆ ಜೈಲ್ಲಿ‌ನಲ್ಲಿ ಏನು ಕೆಲಸ ಕೊಡಬೇಕು ಎಂಬುದರ ಬಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲೇ ಪ್ರಜ್ವಲ್ ರೇವಣ್ಣಗೆ ಜೈಲ್ಲಿನಲ್ಲಿ ಕೆಲಸವನ್ನು ನೀಡಲಿದ್ದಾರೆ.
ಸದ್ಯ ಪ್ರಜ್ವಲ್ ವಿದ್ಯಾಭ್ಯಾಸ ಮೇಲೆ ಕೆಲಸ ನೀಡಲು ಚಿಂತನೆ ನಡೆದಿದೆ. ಅಪರಾಧಿ ಪ್ರಜ್ವಲ್ ಬಿ.ಇ. ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾರೆ.

 

 

ವ್ಯಾಸಂಗಕ್ಕೆ ಹೊಂದಿಕೊಳ್ಳುವ ಕೆಲಸ ನೀಡಲು ಜೈಲು ಅಧಿಕಾರಿಗಳ ಪ್ಲ್ಯಾನ್ ಮಾಡಿದ್ದಾರೆ. ಸಜಾಬಂಧಿ ಖೈದಿಗಳು ಕಡ್ಡಾಯವಾಗಿ ಜೈಲ್ಲಿ‌ನಲ್ಲಿರುವ ಯಾವುದಾದರೊಂದು ಕೆಲಸ ಮಾಡಬೇಕು. ಜೈಲಿನಲ್ಲಿ ಬೇಕರಿ, ತೋಟಗಾರಿಕೆ, ಗ್ರಂಥಾಲಯ ನಿರ್ವಹಣೆ, ಶಿಕ್ಷಣ, ಮಗ್ಗ, ಸಣ್ಣ ಪುಟ್ಟ ಕೈಗಾರಿಕೆ ಕೆಲಸ , ಅಡುಗೆ ಮನೆ ನಿರ್ವಹಣೆ, ಅಡ್ಮಿನಿಸ್ಟ್ರೇಶನ್ ನೋಡಿಕೊಳ್ಳುವುದು, ಸ್ಕಿಲ್ ಡೆವಲಪ್ಮೆಂಟ್ ಮುಂತಾದ ಕೆಲಸಗಳು ಇವೆ . ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ 615 ರೂಪಾಯಿ ಕೂಲಿ ನಿಗದಿಯಾಗಲಿದೆ.ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ. ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಸದ್ಯ ಸಜಾ ಖೈದಿಯಾಗಿರುವ ಪ್ರಜ್ವಲ್ ಯಾವ ಕೆಲಸ ಜೈಲಿನಲ್ಲಿ ಮಾಡ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!