ಪ್ರಜ್ವಲ್ ರೇವಣ್ಣಗೆ ದಿನಕ್ಕೆ ಎಷ್ಟು ಕೂಲಿ ಗೊತ್ತಾ? ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆ.

ರೇಪ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆಯಾಗಲಿದೆ. ಪ್ರಜ್ವಲ್ ವಿದ್ಯಾಭ್ಯಾಸದ ಮೇಲೂ ಕೆಲಸ ಹಂಚಿಕೆಯಾಗಬಹುದು. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಈಗ ದಿನಗೂಲಿ ಪಡೆಯಬೇಕಾಗಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣಗೆ ಜೈಲ್ಲಿ‌ನಲ್ಲಿ ಏನು ಕೆಲಸ ಕೊಡಬೇಕು ಎಂಬುದರ ಬಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲೇ ಪ್ರಜ್ವಲ್ ರೇವಣ್ಣಗೆ ಜೈಲ್ಲಿನಲ್ಲಿ ಕೆಲಸವನ್ನು ನೀಡಲಿದ್ದಾರೆ.
ಸದ್ಯ ಪ್ರಜ್ವಲ್ ವಿದ್ಯಾಭ್ಯಾಸ ಮೇಲೆ ಕೆಲಸ ನೀಡಲು ಚಿಂತನೆ ನಡೆದಿದೆ. ಅಪರಾಧಿ ಪ್ರಜ್ವಲ್ ಬಿ.ಇ. ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾರೆ.

 

 

ವ್ಯಾಸಂಗಕ್ಕೆ ಹೊಂದಿಕೊಳ್ಳುವ ಕೆಲಸ ನೀಡಲು ಜೈಲು ಅಧಿಕಾರಿಗಳ ಪ್ಲ್ಯಾನ್ ಮಾಡಿದ್ದಾರೆ. ಸಜಾಬಂಧಿ ಖೈದಿಗಳು ಕಡ್ಡಾಯವಾಗಿ ಜೈಲ್ಲಿ‌ನಲ್ಲಿರುವ ಯಾವುದಾದರೊಂದು ಕೆಲಸ ಮಾಡಬೇಕು. ಜೈಲಿನಲ್ಲಿ ಬೇಕರಿ, ತೋಟಗಾರಿಕೆ, ಗ್ರಂಥಾಲಯ ನಿರ್ವಹಣೆ, ಶಿಕ್ಷಣ, ಮಗ್ಗ, ಸಣ್ಣ ಪುಟ್ಟ ಕೈಗಾರಿಕೆ ಕೆಲಸ , ಅಡುಗೆ ಮನೆ ನಿರ್ವಹಣೆ, ಅಡ್ಮಿನಿಸ್ಟ್ರೇಶನ್ ನೋಡಿಕೊಳ್ಳುವುದು, ಸ್ಕಿಲ್ ಡೆವಲಪ್ಮೆಂಟ್ ಮುಂತಾದ ಕೆಲಸಗಳು ಇವೆ . ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ 615 ರೂಪಾಯಿ ಕೂಲಿ ನಿಗದಿಯಾಗಲಿದೆ.ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ. ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಸದ್ಯ ಸಜಾ ಖೈದಿಯಾಗಿರುವ ಪ್ರಜ್ವಲ್ ಯಾವ ಕೆಲಸ ಜೈಲಿನಲ್ಲಿ ಮಾಡ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!