ಆಹಾರ ಪ್ಯಾಕೆಟ್ ಗಳ ಮೇಲೆ ಇರುವ ಬಣ್ಣದ ಚುಕ್ಕೆಗಳ ಹಿಂದಿನ ರಹಸ್ಯ ಏನು ಗೊತ್ತಾ.!

ಚಿಪ್ಸ್, ಕುರುಕರೇ, ಬನ್ ಹೀಗೆ ಅಂಗಡಿಯಿಂದ ಯಾವುದಾದರೂ ತಿನಿಸನ್ನು ನಾವು ಖರೀದಿ ಮಾಡಿದಾಗ ಅವುಗಳ ಮೇಲೆ ಕಾಮಾನ್ ಆಗಿ ಕೆಂಪು ಹಾಗೂ ಹಸಿರು ಬಣ್ಣದ ಡಾಟ್ ಅಥವಾ ಚಿಹ್ನೆಗಳು ಇದ್ದೇ ಇರುತ್ತವೆ. ಇದರ ಬಗ್ಗೆ ಹಲವು ಜನರಿಗೆ ತಿಳಿದಿರಬಹುದು. ಈ ಎರಡು ಬಣ್ಣ ಅಲ್ಲದೇ ಇನ್ನು ಕೆಲವು ತಿನಿಸುಗಳ ಪ್ಯಾಕೆಟ್ ಮೇಲೆ ನೀಲಿ, ಹಳದಿ, ಕಪ್ಪು ಡಾಟ್ಗಳು ಇರುತ್ತವೆ ಇವುಗಳ ಅರ್ಥ ಏನು?.

ಆರೋಗ್ಯ ಹಾಗೂ ಆಹಾರ ಪದ್ಧತಿಗೆ ಅನುಗುಣವಾಗಿ ಈ ಬಣ್ಣದ ಚಿಹ್ನೆಗಳು ಸಲಹೆ, ಸೂಚನೆಗಳನ್ನು ನೀಡುತ್ತವೆ. ಅಂದರೆ ಆರೋಗ್ಯದ ಸಮಸ್ಯೆ ಇರುವವರು ಇದನ್ನು ತಿನ್ನಬಾರದು ಎಂದು. ಇದರಿಂದ ನೀವು ಸರಿಯಾದ ಆಹಾರ ತಿನಿಸನ್ನು ಆಯ್ಕೆ ಮಾಡಲು ಅನುಕೂಲವಾಗುತ್ತದೆ. ಅಲ್ಲದೇ ಸಸ್ಯಾಹಾರಿ ಹಾಗೂ ಮಾಂಸಹಾರಿ ಸೇವಿಸುವವರು ಇದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೆಂಪು, ಹಸಿರು ಡಾಟ್ಸ್ ಸೂಚಿಸುತ್ತವೆ. ಉಳಿದ ಡಾಟ್ಸ್ ಅಥವಾ ಚಿಹ್ನೆಗಳು ಏನೇನು ಸೂಚಿಸುತ್ತವೆ?.

ಕೆಂಪು ಡಾಟ್: ತಿನಿಸಿನ ಪ್ಯಾಕೆಟ್ ಮೇಲೆ ಕೆಂಪು ಬಣ್ಣದ ವೃತ್ತಾಕಾರದ ಚಿಹ್ನೆ ಇದ್ದರೆ ಅದು ಮಾಂಸಾಹಾರಿ ಎಂದು ಅರ್ಥ. ಇದರಲ್ಲಿ ಚಿಕನ್, ಮಟನ್, ಮೀನು ಸೇರಿದಂತೆ ಮಾಂಸಹಾರಿ ವಸ್ತುವನ್ನು ಉಪಯೋಗ ಮಾಡಿರುತ್ತಾರೆ.

ಹಸಿರು ಚಿಹ್ನೆ:ಪ್ಯಾಕೆಟ್ ಮೇಲೆ ಹಸಿರು ಬಣ್ಣದ ಚಿಹ್ನೆ ಇದ್ದರೇ ಅದು ಸಂಪೂರ್ಣವಾಗಿ ಸಸ್ಯಾಹಾರಿ ಎಂದರ್ಥ. ಇದರಲ್ಲಿ ಯಾವುದೇ ಮಾಂಸ ಅಥವಾ ಮೊಟ್ಟೆಗಳನ್ನು ಬಳಕೆ ಮಾಡಿರಲ್ಲ.

ನೀಲಿ ಚಿಹ್ನೆ: ಪಾಕೆಟ್ ಮೇಲೆ ನೀಲಿ ಬಣ್ಣದ ಚಿಹ್ನೆ ಕಂಡುಬಂದರೆ ಅದನ್ನು ನಾವು ವೈದ್ಯಕೀಯ ಪ್ರಾಡಕ್ಟ್ ಎಂದು ತಿಳಿದುಕೊಳ್ಳಬೇಕು. ಇಂಥವುಗಳನ್ನು ಯಾರಾದರೂ ತೆಗೆದುಕೊಳ್ಳಬೇಕು ಎಂದರೆ ಮೊದಲು ವೈದ್ಯರಿಂದ ಸಲಹೆ, ಸೂಚನೆ ತೆಗೆದುಕೊಂಡಿರಬೇಕು.

https://www.goodnews24x7.com/dharmasthala-burude-mystery-will-6-locals-come-forward-on-behalf-of-the-witness/ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?

ಹಳದಿ ಡಾಟ್: ಈ ಆಹಾರದಲ್ಲಿ ಮೊಟ್ಟೆ ಉಪಯೋಗ ಮಾಡಲಾಗಿದೆ ಎಂದು ತಿಳಿಸುತ್ತದೆ. ಕೆಲವು ಜನರು ಮೊಟ್ಟೆಗಳನ್ನು ತಿನ್ನುವುದಿಲ್ಲ. ಅಂಥವರು ಪಾಕೆಟ್ ಮೇಲೆ ಹಳದಿ ಬಣ್ಣದ ಚಿಹ್ನೆ ಇದ್ದರೇ ಅದನ್ನು ಖರೀದಿ ಮಾಡದೇ ಇರಬಹುದು. ಏಕೆಂದರೆ ಮೊಟ್ಟೆ ಬಳಸಿ ತಿನಿಸು ಮಾಡಲಾಗಿದೆ ಎಂದುಬು ಇದು ಹೇಳುತ್ತದೆ.

ಕಪ್ಪು ಚಿಹ್ನೆ: ಈ ಪ್ಯಾಕೆಟ್ನಲ್ಲಿ ಕೆಮಿಕಲ್ಸ್ (Chemicals) ಬಳಕೆ ಮಾಡಲಾಗಿದೆ ಎಂದು ಹೇಳುತ್ತದೆ. ಪ್ರಾಡಕ್ಟ್ನಲ್ಲಿ ರಾಸಾಯನಿಕ ಪ್ರಮಾಣವನ್ನು ಅಧಿಕವಾಗಿ ಬಳಕೆ ಮಾಡಲಾಗಿರುತ್ತದೆ. ಏಕೆಂದರೆ ದೀರ್ಘಕಾಲ ಉಳಿಯುವಿಕೆಗಾಗಿ ಆಹಾರವನ್ನ ಸಂಸ್ಕರಣೆ ಮಾಡಲಾಗಿರುತ್ತದೆ. ಇದನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲಿನ ಈ ಬಣ್ಣದ ಚಿಹ್ನೆಗಳು ನಾವು ಏನು ತಿನ್ನುತ್ತಿದ್ದೇವೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡುತ್ತವೆ. ಮುಂದಿನ ಬಾರಿ ನೀವು ಯಾವುದೇ ಪ್ಯಾಕೆಟ್ ಆಹಾರವನ್ನು ಖರೀದಿಸುವಾಗ, ಈ ಚಿಹ್ನೆಗಳನ್ನು ಗಮನಿಸುವುದನ್ನು ಮರೆಯದಿರಿ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು