ಹಿಂದೂ ಸಂಪ್ರದಾಯದಲ್ಲಿ ಈ ದಿನ ಬಹಳ ವಿಶೇಷ ಮಹತ್ವ ನೀಡಲಾಗಿದ್ದು, ಈ ದಿನ ನೀವು ಮಾಡುವ ಈ ಕೆಲವು ತಪ್ಪುಗಳಿಂದ ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.
ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರು ಹಸಿರು ಬಳೆಗಳನ್ನು ತೊಡುವುದೇಕೆ:

ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ. ಹಸಿರು ಬಣ್ಣವು ಸಮೃದ್ಧಿ, ಹೊಸ ಆರಂಭ, ಸೌಂದರ್ಯ ಮತ್ತು ಸಕಾರಾತ್ಮಕ ಶಕ್ತಿಯನ್ನು ಸೂಚಿಸುವಂತೆ ಹಸಿರು ಗಾಜಿನ ಬಳೆಗಳು ಅದೃಷ್ಟ, ಸಮೃದ್ಧಿ, ಹೊಸ ಆರಂಭ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ಅಲ್ಲದೆ ಹಸಿರು ಬಳೆಗಳನ್ನು ಧರಿಸುವುದರಿಂದ ಶಿವ ಪಾರ್ವತಿಯ ಆಶಿರ್ವಾದವೂ ಲಭಿಸುತ್ತದೆ ಎಂದು ನಂಬಲಾಗಿದೆ.
ಇದೇ ಕಾರಣಕ್ಕಾಗಿ ವಿವಾಹಿತ ಮಹಿಳೆಯರು ಹೆಚ್ಚಾಗಿ ಹಸಿರು ಗಾಜಿನ ಬಳೆಯನ್ನೇ ತೊಡುವುದು. ಸೌಭಾಗ್ಯದ ಸಂಕೇತವೆಂದು ಮುತ್ತೈದೆಯರು ಭೀಮನ ಅಮವಾಸ್ಯೆ, ವರಮಹಾಲಕ್ಷ್ಮಿ ಹಬ್ಬದಂದು ಕೈತುಂಬಾ ಹಸಿರು ಬಳೆ ತೊಡುತ್ತಾರೆ. ಮುಖ್ಯವಾಗಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು ಹಸಿರು ಗಾಜಿನ ಬಳೆಯನ್ನು ತೊಡುತ್ತಾರೆ.




