ಡಾ ರಾಜ್​​ಕುಮಾರ್ ಅವರಿಂದ ದಸರಾ ‘ಉದ್ಘಾಟನೆ’ ಪ್ರಾರಂಭವಾಗಿದ್ದು! ಹೇಗೆ ಗೊತ್ತೆ?

ನಾಡ ಹಬ್ಬ ದಸರಾ ಆಚರಣೆಗೆ ದಿನಗಣನೆ ಶುರುವಾಗಿದೆ. ಜಂಬೂ ಸವಾರಿಯ ತಾಲೀಮು ಜಾರಿಯಲ್ಲಿದೆ. ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ಕಾಖ್ ಅವರು ಮಾಡಲಿದ್ದಾರೆ. ಆದರೆ ಇದಕ್ಕೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ದಸರಾ ಉದ್ಘಾಟನೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು ಡಾ ರಾಜ್​​ಕುಮಾರ್ ಅವರು ಎಂಬುದು ಎಷ್ಟು ಮಂದಿಗೆ ಗೊತ್ತು?
ದಸರಾ ‘ಉದ್ಘಾಟನೆ’ ಪ್ರಾರಂಭವಾಗಿದ್ದು ಡಾ ರಾಜ್​​ಕುಮಾರ್ ಅವರಿಂದ, ಹೇಗೆ ಗೊತ್ತೆ?

ಮೈಸೂರು ದಸರಾ ಆಚರಣೆಗೆ ಶತಮಾನಗಳ ಇತಿಹಾಸವಿದೆ. 14ನೇ ಶತಮಾನದಿಂದಲೂ ಮೈಸೂರಿನಲ್ಲಿ ದಸರಾ ಆಚರಣೆ ಬಲು ಅದ್ಧೂರಿಯಾಗಿ ಆಚರಣೆ ಆಗುತ್ತಾ ಬರುತ್ತಿದೆ. ಮೊದಲಿಗೆ ಮಹಾರಾಜರು ಅಂಬಾರಿಯಲ್ಲಿ ಕೂತು ನಗರದ ಪ್ರದಕ್ಷಿಣೆ ಹಾಕುತ್ತಿದ್ದರು ಇದಕ್ಕೆ ಜಂಬೂ ಸವಾರಿ ಎನ್ನಲಾಗುತ್ತಿತ್ತು. ಆ ಬಳಿಕ ಅಂಬಾರಿಯಲ್ಲಿ ಚಾಮುಂಡೇಶ್ವರಿ ತಾಯಿಯ ಮೂರ್ತಿಯನ್ನಿಟ್ಟು ಪ್ರದಕ್ಷಿಣೆ ಹಾಕಿಸಲಾಗುತ್ತದೆ.

ಈ ಬಾರಿಯೂ ಸಹ ದಸರಾ ಅದ್ಧೂರಿಯಾಗಿ ನಡೆಯಲಿದೆ. ಆದರೆ ಈ ಬಾರಿ ದಸರಾ ಸಣ್ಣ ವಿವಾದಕ್ಕೆ ಕಾರಣವಾಗಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಸರ್ಕಾರವು ಆಹ್ವಾನ ನೀಡಿರುವುದನ್ನು ಬಿಜೆಪಿಗರು ವಿರೋಧಿಸುತ್ತಿದ್ದಾರೆ. ಅಂದಹಾಗೆ ಈ ‘ದಸರಾ ಉದ್ಘಾಟನೆ’ ಎಂಬುದಕ್ಕೆ ಪ್ರಾಮುಖ್ಯತೆ ದೊರೆತಿದ್ದು ಡಾ ರಾಜ್​​ಕುಮಾರ್ ಅವರಿಂದ. ದಸರಾ ಅನ್ನು ಮೊದಲ ಬಾರಿ ‘ಉದ್ಘಾಟನೆ’ ಮಾಡಿದ್ದು ಡಾ ರಾಜ್​​ಕುಮಾರ್ ಅವರೇ.

1993ಕ್ಕೆ ಮುಂಚೆ ದಸರಾ ಉದ್ಘಾಟನೆ ಮಾಡುವ ಸಂಪ್ರದಾಯ ಇರಲಿಲ್ಲ. ಅದಕ್ಕೂ ಮುಂಚೆ ಸ್ಥಳೀಯವಾಗಿ ಪೂಜಾ ಮಾಡಿ ಜಂಬೂ ಸವಾರಿ ಮಾಡಲಾಗುತ್ತಿತ್ತು. ಜಂಬೂ ಸವಾರಿಗೆ ಮುಂಚೆ ಚಿನ್ನದ ಅಂಬಾರಿಗೆ ಮುಖ್ಯ ಮಂತ್ರಿ ಆಗಿದ್ದವರು ಪುಷ್ಪಾರ್ಚನೆ ಮಾಡುವ ಸಂಪ್ರದಾಯ ಇತ್ತು. ಆದರೆ 1993 ರಲ್ಲಿ ನೆರೆಯ ಮಹಾರಾಷ್ಟ್ರದ ಲಾಥೋರ್​​ನಲ್ಲಿ ಭಾರಿ ಭೂಕಂಪನ ಆಗಿತ್ತು. ಸುಮಾರು 10 ಸಾವಿರ ಜನ ನಿಧನ ಹೊಂದಿದ್ದರು. 10 ಲಕ್ಷ ಜನ ಮನೆ-ಮಠ ಕಳೆದುಕೊಂಡಿದ್ದರು. ನೆರೆ ರಾಜ್ಯದಲ್ಲಿ ವಿಪತ್ತು ಸಂಭಿಸಿದ್ದ ಕಾರಣ ರಾಜ್ಯದಲ್ಲಿ ದಸರಾ ಆಚರಣೆ ಬೇಡ ಎಂಬ ಕೂಗು ಎದ್ದಿತ್ತು.

ಆಗ ಸಿಎಂ ಆಗಿದ್ದವರು ವೀರಪ್ಪ ಮೋಯ್ಲಿ. ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬಂದಿರುವ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದಸರಾ ಅನ್ನು ನಿಲ್ಲಿಸುವುದು ಬೇಡ ಎಂಬ ನಿರ್ಧಾರವನ್ನು ವೀರಪ್ಪ ಮೋಯ್ಲಿ ತಳೆದರು. ಆದರೆ ಅವರ ನಿರ್ಧಾರಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾದವು. ಆಗ ವೀರಪ್ಪ ಮೋಯ್ಲಿ ಅವರು ಡಾ ರಾಜ್​​ಕುಮಾರ್ ಅವರ ನೆರವು ಪಡೆದರು. ರಾಜ್​​ಕುಮಾರ್ ಅವರನ್ನು ದಸರಾ ಉದ್ಘಾಟನೆಗೆಂದು ಆಹ್ವಾನಿಸಿದರು. ರಾಜ್​​ಕುಮಾರ್ ಅವರ ಆಗಮನದಿಂದ ದಸರಾ ಆಚರಣೆಗೆ ಇದ್ದ ವಿರೋಧ ತಣ್ಣಗಾಯ್ತು. ಸುಸೂತ್ರವಾಗಿ ಹಿಂದಿಗಿಂತಲೂ ಅದ್ಧೂರಿಯಾಗಿ ದಸರಾ ಆಚರಣೆ ನಡೆಯಿತು.

ರಾಜ್​​ಕುಮಾರ್ ಉದ್ಘಾಟನೆ ಮಾಡಿದ ಬಳಿಕ, ಪ್ರತಿವರ್ಷವೂ ಯಾರನ್ನಾದರೂ ಗಣ್ಯರನ್ನು, ಸಾಹಿತಿಗಳನ್ನು ಕರೆಸಿ ದಸರಾ ಉದ್ಘಾಟಿಸುವ ಸಂಪ್ರದಾಯ ಆರಂಭವಾಯ್ತು. ಜಂಬೂ ಸವಾರಿಯ ಹೊರತಾಗಿ ಸಿಎಂ ಆಗಿದ್ದವರು ಬೇರೆ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರಲಿಲ್ಲ. 1994 ರಲ್ಲಿ ಸಿಎಂ ಆದ ಎಚ್​​​ಡಿ ದೇವೇಗೌಡ ಅವರು ಉದ್ಘಾಟನೆ ಕಾರ್ಯಕ್ರಮದಲ್ಲಿಯೂ ಭಾಗವಹಿಸುವ ಮೂಲಕ ಸಿಎಂಗಳು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಂಪ್ರದಾಯಕ್ಕೆ ಚಾಲನೆ ನೀಡಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು