ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ!

 

ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ ಆರೋಪವನ್ನೂ ಎದುರಿಸುತ್ತಿರುವ ಸಂಸ್ಥೆಯ ಹಣಕಾಸು ವ್ಯವಹಾರಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವೆಲಪರ್ಸ್​ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ED ಅಧಿಕಾರಿಗಳು ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ.

ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ
1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ವಸತಿ, ವಾಣಿಜ್ಯ, ರಿಟೇಲ್ ಹಾಗೂ ಇತರೆ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಸಂಸ್ಥೆ ಕೈಗೊಂಡಿದೆ. ಇದೀಗ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಕಚೇರಿ ಹಾಗೂ ಸಂಸ್ಥಾಪಕರ ಮನೆ ಮೇಲೂ ದಾಳಿ ನಡೆಸಿದೆ.

ಬೆಳಗ್ಗೆ ದೆಹಲಿ ಕಚೇರಿಯಿಂದ ಬಂದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ಆರು ವಾಹನಗಳಲ್ಲಿ ಆಗಮಿಸಿ ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ ತಂಡ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ.

ಇದೇ ರೀತಿ ಹಣಕಾಸಿನ ಪ್ರಕರಣದಲ್ಲಿ ಇಡಿಯು ಈಗಾಗಲೇ 2022ರಲ್ಲಿ ದಾಳಿ ನಡೆಸಿದ್ದು, 2023ರಲ್ಲಿ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಅಲ್ಲದೇ ಗ್ರಾಹಕರಿಂದ ಅಪಾರ್ಟ್ಮೆಂಟ್‌ಗಾಗಿ ಹಣ ಪಡೆದು ಅದನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಆರೋಪವೂ ಕೇಳಿಬಂದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನು ಪರಿ

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…

You Missed

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ

ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ

ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’

ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’