ಫೋಟೊ ತೆಗೆಯಲು ಹೋದ ವ್ಯಕ್ತಿ ಮೇಲೆ ಆನೆ ದಾಳಿ .

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭಾನುವಾರ ಕಾಡಾನೆಯ ಫೋಟೊ ತೆಗೆಯಲು ಹೋದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆದಿದೆ.
ಮಧುಮಲೈ ಅರಣ್ಯದ ಕಡೆಯಿಂದ ಬಂಡೀಪುರದ ಕಡೆಗೆ ಬರುವ ಸಂದರ್ಭದಲ್ಲಿ ಕೆಕ್ಕನಹಳ್ಳ ಅರಣ್ಯ ಪ್ರದೇಶದ ಬಳಿ ಮರಿಯೊಂದಿಗೆ ಇದ್ದ ಆನೆಯ ಫೋಟೋ ತೆಗೆಯಲು ಹೋದಾಗ ದಾಳಿ ನಡೆದಿದೆ. ದಾಳಿಯಿಂದ ಪ್ರಜ್ಞೆತಪ್ಪಿ ರಸ್ತೆಯಲ್ಲಿಯೇ ಬಿದ್ದಿದ್ದ ವ್ಯಕ್ತಿಯನ್ನು ಸಂಬಂಧಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆನೆಯ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.
ದಾಳಿಗೊಳಗಾದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪ್ರಭಾಕರನ್ ತಿಳಿಸಿದರು. ಆನೆಗಳು ಮರಿಗಳೊಂದಿಗೆ ಇರುವಾಗ ಮನುಷ್ಯರನ್ನು ಕಂಡರೆ ದಾಳಿ ಮಾಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಮರಿಯ ರಕ್ಷಣೆ ಮಾಡಲು ಸಿಟ್ಟಿಗೇಳುವುದು ಸಹಜ. ಇಂತಹ ಸಂದರ್ಭದಲ್ಲಿ ಪ್ರವಾಸಿಗರು ಫೋಟೋ ತೆಗೆಯಲು ಮುಂದಾಗಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಕ್ತಿ ಮೇಲೆ ಕಾಡಾನೆ ದಾಳಿ ನಡೆಸಿರುವ ದೃಶ್ಯ.

ಘಟನೆ ವಿವರ :
ಬಂಡೀಪುರ- ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆ ಬದಿಯಲ್ಲಿ ಕಾಡಾನೆ ನಿಂತುಕೊಂಡಿರುತ್ತದೆ. ಈ ವೇಳೆ ಬೈಕ್​, ಕಾರಿನಿಂದ ಇಳಿದ ಪ್ರವಾಸಿಗರು ಹುಚ್ಚಾಟ ಮಾಡುತ್ತಿರುತ್ತಾರೆ. ಆಗ ಕೇರಳದ ಓರ್ವ ಪ್ರವಾಸಿಗ ಆನೆ ಸಮೀಪಕ್ಕೆ ಹೋಗಿ ಫೋಟೋ ತೆಗೆಯಲು ಮುಂದಾಗಿದ್ದಾನೆ. ಜನ ಕಿರುಚಾಡಿದ್ದರಿಂದ ಆನೆ ಉದ್ವೇಗಗೊಂಡು ಫೋಟೋ ತೆಗೆಯುತ್ತಿದ್ದವನ ಮೇಲೆ ಅಟ್ಯಾಕ್ ಮಾಡಿದೆ.

ಆನೆ, ಪ್ರವಾಸಿಗನ ಬೆನ್ನು ಹತ್ತಿ ಗುಮ್ಮಲು ಹೋಗಿದೆ. ಆಗ ಓಡುತ್ತಿದ್ದ ಪ್ರವಾಸಿಗ ರಸ್ತೆ ಮೇಲೆ ಎಡವಿ ಬಿದ್ದಿದ್ದಾನೆ. ಅವನನ್ನು ಕಾಲಿನಿಂದ ಒದ್ದು ಆನೆ ಅರಣ್ಯದೊಳಕ್ಕೆ ಹೋಗಿದೆ. ಗಾಯಗೊಂಡ ಪ್ರವಾಸಿಗನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅದೃಷ್ಟವಶಾತ್ ಬದುಕುಳಿದಿದ್ದಾನೆ. ಕಾಡು ಪ್ರಾಣಿಗಳ ಜೊತೆ ಹುಷಾರ್​ ಆಗಿರಿ. ಮನುಷ್ಯರಂತೆ ವರ್ತಿಸಿ ಎಂದರೆ ಜನರೇ ಪ್ರಾಣಿಗಳಂತೆ ವರ್ತಿಸಿ ಇಂತಹ ಅನಾಹುತಕ್ಕೆ ಒಳಗಾಗುತ್ತಿದ್ದಾರೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!