ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು‌. ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!