‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳಿರುವ ಏಳುಮಲೆ ಸಿನಿಮಾ ಸೆಪ್ಟೆಂಬರ್ 5ರಂದು ತೆರೆಗೆ ಬರ್ತಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ತಾರಾಬಳಗದಲ್ಲಿದ್ದಾರೆ.

ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ

Related Posts

ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು