ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೈಸೂರು ಕ್ರಾಫರ್ಡ್ ಭವನದಲ್ಲಿ ಮೌಲ್ಯಮಾಪನ!

ಮೈಸೂರು : ಕ್ರಾಫರ್ಡ್ ಭವನದಲ್ಲಿರುವ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರಪತ್ರಿಕೆಗಳನ್ನು ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪನ ನಡೆಸಿದ ಘಟನೆ ನಡೆದಿದೆ.

ಸೆಸ್ಕ್ ಮೂರು ದಿನದ ಹಿಂದೆಯೇ ‘ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ಪ್ರಕಟಣೆ ಹೊರಡಿಸಿತ್ತು. ಪತ್ರಿಕೆಗಳಲ್ಲೂ ಪ್ರಕಟವಾಗಿತ್ತು. ಮೈಸೂರು ವಿಶ್ವವಿದ್ಯಾಲಯವು ಅದಕ್ಕೆ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಇದ್ದರಿಂದ ಮೌಲ್ಯಮಾಪಕರು ಇಡೀ ದಿನ ತೊಂದರೆ ಅನುಭವಿಸಿದ ಘಟನೆ ನಡೆದಿದೆ.
ವಯಸ್ಸಾದ ಪ್ರಾಧ್ಯಾಪಕರು ಮಂದ ಬೆಳಕಿನಲ್ಲಿ ಮೌಲ್ಯಮಾಪನ ಮಾಡಿದ್ದರಿಂದ, ಅಂಕಗಳು ವ್ಯತ್ಯಾಸವಾಗುವ ಆತಂಕವೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಚಿತ್ರಗಳಿಂದ ವ್ಯಕ್ತವಾಗಿದೆ.

ಪರೀಕ್ಷಾಂಗ ವಿಭಾಗ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಕಿಟಕಿಗಳು ದೂರದಲ್ಲಿದ್ದವು. ಮೋಡವೂ ಕವಿದಿದ್ದರಿಂದ ಬೆಳಕಿರಲಿಲ್ಲ. ನಾಳೆ ಉತ್ತರ ಪತ್ರಿಕೆಗಳನ್ನೂ ನೋಡುತ್ತೇವೆಂದರೂ ಅವಕಾಶ ನೀಡಲಿಲ್ಲ. ಜನರೇಟರ್ ಕೆಟ್ಟಿದ್ದು, ಡೀಸೆಲ್ ಹಾಕಲೂ ವಿಶ್ವವಿದ್ಯಾಲಯದ ಬಳಿ ಹಣವಿಲ್ಲವೆಂದು ಹೇಳಿದ್ದರಿಂದ ಸುಮ್ಮನಾದೆವು ಎಂದು ಸಹಾಯಕ ಪ್ರಾಧ್ಯಾಪಕರೊಬ್ಬರು ತಿಳಿಸಿದರು.

ಗಂಭೀರತೆಯೂ ಮಾಯ: ‘ಉತ್ತರ ಪತ್ರಿಕೆಗಳ ಮೌಲ್ಯಮಾಪನ 20 ದಿನದಿಂದ ನಡೆಯುತ್ತಿದೆ. ಐವರು ಮೌಲ್ಯಮಾಪಕರಿಗೆ ಒಬ್ಬ ಪ್ರತಿ ಮುಖ್ಯಸ್ಥರಿರುತ್ತಾರೆ. ನಿಗದಿಯಂತೆ ಪ್ರಕ್ರಿಯೆ ಆರಂಭವಾಗಿತ್ತು. ಕಳೆದ ಬಾರಿಯ ಹಣವನ್ನೇ ನೀಡದ್ದರಿಂದ ಉಪನ್ಯಾಸಕರು ಪ್ರತಿಭಟಿಸಿದ್ದರು. ದೊಂಬಿಯಂತೆ ಪ್ರಕ್ರಿಯೆ ನಡೆದಿದೆ. ಮೊದಲಿದ್ದ ಗಂಭೀರತೆಯೇ ಮಾಯವಾಗಿದೆ ಎಂದರು.
ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ. ಉಪನ್ಯಾಸಕರು ಮೌಲ್ಯಮಾಪನದ ದಿನವೇ ಕಂಪ್ಯೂಟರ್ ಗೆ ಅಂಕಗಳ ದತ್ತಾಂಶ ನೀಡಬೇಕಿತ್ತು. ಈಗ ಮಾರನೇಯ ದಿನ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗೆ ಪರೀಕ್ಷಾಂಗ ಕುಲಸಚಿವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ ಎಂದು ಆರೋಪಿಸಲಾಗಿದೆ.

ಗ್ರಾಮೀಣ ಭಾಗದ ಖಾಯಂ ಪ್ರಾಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರಿಂದಲೇ ಮೌಲ್ಯಮಾಪನ ನಡೆದಿದೆ. ಆದರೆ, ನಗರ ಭಾಗದ ಖಾಯಂ ಅಧ್ಯಾಪಕರು ಬರುತ್ತಿಲ್ಲ. ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂಬ ಸುತ್ತೋಲೆಯನ್ನೂ ಹೊರಡಿಸುತ್ತಿಲ್ಲ ಎಂದು ಅಧ್ಯಾಪಕರೊಬ್ಬರು ತಿಳಿಸಿದರು.

ಮೊದಲಿದ್ದ ಪಾರದರ್ಶಕತೆ, ಶಿಸ್ತು ಇಲ್ಲ. ಯಾರು ಬೇಕಾದರೂ ಭವನದೊಳಕ್ಕೆ ಬರಬಹುದು. ಭದ್ರತೆಯ ಬಗ್ಗೆಯೂ ನಿರ್ಲಕ್ಷ್ಯವಿದೆ. ಎಲ್ಲಕ್ಕೂ ವಿಶ್ವವಿದ್ಯಾಲಯಕ್ಕೆ ಹಣವಿಲ್ಲವೆಂದು ಆಡಳಿತ ಸಿಬ್ಬಂದಿ ಹೇಳುತ್ತಾರೆ. ಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಡೆಯುವುದೇಕೆ ಎಂದು ಅಧ್ಯಾಪಕರೊಬ್ಬರು ಪ್ರಶ್ನಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!