ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೈಸೂರು ಕ್ರಾಫರ್ಡ್ ಭವನದಲ್ಲಿ ಮೌಲ್ಯಮಾಪನ!

ಮೈಸೂರು : ಕ್ರಾಫರ್ಡ್ ಭವನದಲ್ಲಿರುವ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರಪತ್ರಿಕೆಗಳನ್ನು ಮೊಬೈಲ್‌ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪನ ನಡೆಸಿದ ಘಟನೆ ನಡೆದಿದೆ.

ಸೆಸ್ಕ್ ಮೂರು ದಿನದ ಹಿಂದೆಯೇ ‘ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ಪ್ರಕಟಣೆ ಹೊರಡಿಸಿತ್ತು. ಪತ್ರಿಕೆಗಳಲ್ಲೂ ಪ್ರಕಟವಾಗಿತ್ತು. ಮೈಸೂರು ವಿಶ್ವವಿದ್ಯಾಲಯವು ಅದಕ್ಕೆ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಇದ್ದರಿಂದ ಮೌಲ್ಯಮಾಪಕರು ಇಡೀ ದಿನ ತೊಂದರೆ ಅನುಭವಿಸಿದ ಘಟನೆ ನಡೆದಿದೆ.
ವಯಸ್ಸಾದ ಪ್ರಾಧ್ಯಾಪಕರು ಮಂದ ಬೆಳಕಿನಲ್ಲಿ ಮೌಲ್ಯಮಾಪನ ಮಾಡಿದ್ದರಿಂದ, ಅಂಕಗಳು ವ್ಯತ್ಯಾಸವಾಗುವ ಆತಂಕವೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಚಿತ್ರಗಳಿಂದ ವ್ಯಕ್ತವಾಗಿದೆ.

ಪರೀಕ್ಷಾಂಗ ವಿಭಾಗ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಕಿಟಕಿಗಳು ದೂರದಲ್ಲಿದ್ದವು. ಮೋಡವೂ ಕವಿದಿದ್ದರಿಂದ ಬೆಳಕಿರಲಿಲ್ಲ. ನಾಳೆ ಉತ್ತರ ಪತ್ರಿಕೆಗಳನ್ನೂ ನೋಡುತ್ತೇವೆಂದರೂ ಅವಕಾಶ ನೀಡಲಿಲ್ಲ. ಜನರೇಟರ್ ಕೆಟ್ಟಿದ್ದು, ಡೀಸೆಲ್ ಹಾಕಲೂ ವಿಶ್ವವಿದ್ಯಾಲಯದ ಬಳಿ ಹಣವಿಲ್ಲವೆಂದು ಹೇಳಿದ್ದರಿಂದ ಸುಮ್ಮನಾದೆವು ಎಂದು ಸಹಾಯಕ ಪ್ರಾಧ್ಯಾಪಕರೊಬ್ಬರು ತಿಳಿಸಿದರು.

ಗಂಭೀರತೆಯೂ ಮಾಯ: ‘ಉತ್ತರ ಪತ್ರಿಕೆಗಳ ಮೌಲ್ಯಮಾಪನ 20 ದಿನದಿಂದ ನಡೆಯುತ್ತಿದೆ. ಐವರು ಮೌಲ್ಯಮಾಪಕರಿಗೆ ಒಬ್ಬ ಪ್ರತಿ ಮುಖ್ಯಸ್ಥರಿರುತ್ತಾರೆ. ನಿಗದಿಯಂತೆ ಪ್ರಕ್ರಿಯೆ ಆರಂಭವಾಗಿತ್ತು. ಕಳೆದ ಬಾರಿಯ ಹಣವನ್ನೇ ನೀಡದ್ದರಿಂದ ಉಪನ್ಯಾಸಕರು ಪ್ರತಿಭಟಿಸಿದ್ದರು. ದೊಂಬಿಯಂತೆ ಪ್ರಕ್ರಿಯೆ ನಡೆದಿದೆ. ಮೊದಲಿದ್ದ ಗಂಭೀರತೆಯೇ ಮಾಯವಾಗಿದೆ ಎಂದರು.
ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ. ಉಪನ್ಯಾಸಕರು ಮೌಲ್ಯಮಾಪನದ ದಿನವೇ ಕಂಪ್ಯೂಟರ್ ಗೆ ಅಂಕಗಳ ದತ್ತಾಂಶ ನೀಡಬೇಕಿತ್ತು. ಈಗ ಮಾರನೇಯ ದಿನ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗೆ ಪರೀಕ್ಷಾಂಗ ಕುಲಸಚಿವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ ಎಂದು ಆರೋಪಿಸಲಾಗಿದೆ.

ಗ್ರಾಮೀಣ ಭಾಗದ ಖಾಯಂ ಪ್ರಾಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರಿಂದಲೇ ಮೌಲ್ಯಮಾಪನ ನಡೆದಿದೆ. ಆದರೆ, ನಗರ ಭಾಗದ ಖಾಯಂ ಅಧ್ಯಾಪಕರು ಬರುತ್ತಿಲ್ಲ. ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂಬ ಸುತ್ತೋಲೆಯನ್ನೂ ಹೊರಡಿಸುತ್ತಿಲ್ಲ ಎಂದು ಅಧ್ಯಾಪಕರೊಬ್ಬರು ತಿಳಿಸಿದರು.

ಮೊದಲಿದ್ದ ಪಾರದರ್ಶಕತೆ, ಶಿಸ್ತು ಇಲ್ಲ. ಯಾರು ಬೇಕಾದರೂ ಭವನದೊಳಕ್ಕೆ ಬರಬಹುದು. ಭದ್ರತೆಯ ಬಗ್ಗೆಯೂ ನಿರ್ಲಕ್ಷ್ಯವಿದೆ. ಎಲ್ಲಕ್ಕೂ ವಿಶ್ವವಿದ್ಯಾಲಯಕ್ಕೆ ಹಣವಿಲ್ಲವೆಂದು ಆಡಳಿತ ಸಿಬ್ಬಂದಿ ಹೇಳುತ್ತಾರೆ. ಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಡೆಯುವುದೇಕೆ ಎಂದು ಅಧ್ಯಾಪಕರೊಬ್ಬರು ಪ್ರಶ್ನಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!