ಕೋಟಿ ಕೊಟ್ರೂ ಸಾಕಾಗಲಿಲ್ಲ.. ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಕ್ರಿಮಿನಾಶಕ ಸೇವಿಸಿ ಸಾ*ವು.

ತಮಿಳುನಾಡು : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಜೀವಕಳೆದುಕೊಂಡಿದ್ದಾಳೆ. ರಿಧಾನ್ಯಾ ಎಂಬ 27 ವರ್ಷದ ನವವಿವಾಹಿತೆ ಕಾರ್ ನಲ್ಲಿ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುತ್ತೇನೆಂದು ಗಂಡನ ಮನೆಯಿಂದ ಕಾರ್ನಲ್ಲಿ ಹೊರಟ ರಿಧಾನ್ಯಾ ಕಾರ್ನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ.

ಈ ವರ್ಷದ ಏಪ್ರಿಲ್ನಲ್ಲಿ ಕವಿನ್ ಕುಮಾರ್ ಜೊತೆಗೆ ರಿಧಾನ್ಯಾ ವಿವಾಹ ನಡೆದಿತ್ತು. ಮದುವೆ ವೇಳೆ 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು, 800 ಗ್ರಾಂ ಚಿನ್ನವನ್ನು ವರದಕ್ಷಿಣೆ ಆಗಿ ರಿಧಾನ್ಯಾ ತಂದೆ ಅಣ್ಣಾದೊರೈ ಗಂಡನ ಮನೆಯವರಿಗೆ ನೀಡಿದ್ದರು. ಆದರೂ ಗಂಡನ ಮನೆಯಲ್ಲಿ ಇನ್ನೂ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಮಾನಸಿಕ ಕಿರುಕುಳ ತಾಳಲಾಗದೇ ನವವಿವಾಹಿತೆ ಜೀವ ಕಳೆದುಕೊಂಡಿದ್ದಾರೆ.

ಜೀವ ತೆಗೆದುಕೊಳ್ಳುವುದಕ್ಕೂ ಮೊದಲು ರಿಧಾನ್ಯ ತನ್ನ ತಂದೆ ಅಣ್ಣಾದೊರೈಗೆ 8 ವಾಯ್ಸ್ ಮೆಸೇಜ್ ಕಳಿಸಿದ್ದರು. ಈ ವಾಯ್ಸ್ ಮೇಸೇಜ್ನಲ್ಲಿ ಗಂಡ ಹಾಗೂ ಅತ್ತೆ, ಮಾವ ಕೊಡುತ್ತಿದ್ದ ಕಿರುಕುಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಜೀವ ಬಿಡುತ್ತಿರುವುದಕ್ಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನನ್ನು ಕ್ಷಮಿಸಿ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ಗೊತ್ತಾಗುತ್ತಿಲ್ಲ. ನನ್ನ ಮಾತು ಕೇಳಿದವರು, ಜೀವನ ಇದೇ ರೀತಿ ಇರುತ್ತೆ, ಜೀವನದಲ್ಲಿ ಇವುಗಳ ಬಗ್ಗೆ ರಾಜೀ ಮಾಡಿಕೊಳ್ಳಬೇಕು ಎಂದು ಹೇಳುತ್ತಾರೆ.

ಅವರಿಗೆ ನನ್ನ ನೋವು ಅರ್ಥವಾಗಲ್ಲ. ನೀವು ನನ್ನ ಬಗ್ಗೆ ಅನುಮಾನ ಪಡಬಹುದು. ಆದರೇ, ನಾನು ಸುಳ್ಳು ಹೇಳುತ್ತಿಲ್ಲ. ನನ್ನ ಸುತ್ತ ಇರುವವರು ನಟಿಸುತ್ತಿದ್ದಾರೆ. ನಾನೇಕೆ ಮೌನವಾಗಿದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ ಅಥವಾ ನಾನೇಕೆ ಈ ರೀತಿ ಇದ್ದೇನೆ. ನನ್ನ ಜೀವನ ಪೂರ್ತಿ ನಾನು ನಿಮಗೆ ಹೊರೆಯಾಗಲ್ಲ. ನಾನು ಈ ಭಾರಿ ಯಾವುದೇ ತಪ್ಪು ಮಾಡಲ್ಲ. ಈ ಜೀವನವನ್ನು ನಾನು ಇಷ್ಟಪಡಲ್ಲ. ಗಂಡ ಕವಿನ್ ಕುಮಾರ್ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ತಂದೆ ಅಣ್ಣಾದೊರೆೈಗೆ ಕಳಿಸಿದ ವಾಯ್ಸ್ ಮೇಸೇಜ್ಗಳಲ್ಲಿ ಇದೆ ಎಂದು ಹೇಳಲಾಗಿದೆ.

ಮಂಡಿಪಾಳ್ಯ ಬಳಿಯ ದೇವಸ್ಥಾನಕ್ಕೆ ಹೋಗುತ್ತೇನೆಂದು ಕಾರ್ನಲ್ಲಿ ರಿಧಾನ್ಯಾ ಹೊರಟಿದ್ದರು. ಬಳಿಕ ರಸ್ತೆ ಪಕ್ಕದಲ್ಲೇ ಕಾರ್ ನಿಲ್ಲಿಸಿ, ಕಾರ್ನಲ್ಲಿ ಕ್ರಿಮಿನಾಶಕ ಸೇವಿಸಿ ಜೀವ ಬಿಟ್ಟಿದ್ದಾರೆ. ಸ್ಥಳೀಯರು ರಸ್ತೆ ಪಕ್ಕ ಕಾರ್ ಬಹಳ ಹೊತ್ತು ನಿಂತಿರುವುದನ್ನು ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪೊಲೀಸರು ಬಂದು ಕಾರ್ ಅನ್ನು ಪರಿಶೀಲಿಸಿದಾಗ, ರಿಧಾನ್ಯಾ ಕ್ರಿಮಿನಾಶಕ ಸೇವಿಸಿರುವುದು ಬೆಳಕಿಗೆ ಬಂದಿದೆ.

ರಿಧಾನ್ಯಾ ಬಾಯಿಯಿಂದ ನೊರೆ ಬಂದಿದೆ. ಪೊಲೀಸರು ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈಗ ಪತಿ, ಅತ್ತೆ, ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಬಿಎನ್ಎಸ್ ಕಾಯಿದೆಯ ಸೆಕ್ಷನ್ 85ರಡಿ ದೂರು ದಾಖಲಾಗಿದೆ. ದೂರಿನ ಆಧಾರದ ಮೇಲೆ ಪತಿ ಕವಿನ್ ಕುಮಾರ್, ಮಾವ ಈಶ್ವರ ಮೂರ್ತಿ, ಅತ್ತೆ ಚಿತ್ರಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಿಧಾನ್ಯಾ ತಂದೆ ಅಣ್ಣಾದೊರೈ ಗಾರ್ಮೆಂಟ್ಸ್ ಫ್ಯಾಕ್ಟರಿಯ ಮಾಲೀಕರು ಆಗಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು