ಕಾಂಗ್ರೆಸ್ ಪಕ್ಷಕ್ಕೆ ದೇಶದ ಚುನಾವಣಾ ವ್ಯವಸ್ಥೆ ಮೇಲೆ ನಂಬಿಕೆಯೇ ಇಲ್ಲ. ಇವಿಎಂ ಮೇಲಂತೂ ಎಳ್ಳಷ್ಟು ವಿಶ್ವಾಸವಿಲ್ಲ. ಹೀಗಾಗಿ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧವೇ ಕೈ ನಾಯಕ ರಾಹುಲ್ ಗಾಂಧಿ ಸಿಡಿದೆದ್ದಿದ್ದಾರೆ. ಇದೇ ವಿಚಾರ ಇಟ್ಟುಕೊಂಡು ದೇಶಾದ್ಯಂತ ಪ್ರತಿಭಟನೆ ನಡೆಸ್ತಿದ್ದಾರೆ. ಇದ್ರ ಮಧ್ಯೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಚುನಾವಣೆ ವಿಚಾರದಲ್ಲಿ ಹೊಸ ನಿಲುವು ತಳೆದಿದೆ.

ರಾಹುಲ್ ಗಾಂಧಿ ಸರಣಿಯಾಗಿ ಮತಗಳ್ಳತನ ಆರೋಪ ಮಾಡಿದ್ದು, ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸ್ತಾನೆ ಇದೆ. ಈ ಮಧ್ಯೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರಗಳನ್ನ ಕೈಗೊಂಡಿದೆ. ಇವಿಎಂ ಸಾಕು, ಬ್ಯಾಲೆಟ್ ಪೇಪರ್ ಬೇಕು ಅಂತ ಚುನಾವಣೆ ಆಯೋಗಕ್ಕೆ ಸಂಪುಟದಿಂದ ಶಿಫಾರಸು ಮಾಡಿದೆ. ಸದ್ಯಕ್ಕೆ ಗ್ರಾಮ ಪಂಚಾಯ್ತಿಯಲ್ಲಿ ಮಾತ್ರ ಬ್ಯಾಲೇಟ್ ಬಳಕೆಯಲ್ಲಿದೆ. ಪುರಸಭೆ, ನಗರಸಭೆ, ಪಾಲಿಕೆ ಎಲೆಕ್ಷನ್ನಲ್ಲಿ ಇವಿಎಂ ಪ್ರಯೋಗ ನಡೆದಿದೆ.
ಇತ್ತೀಚೆಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗಿದೆ.ಮತಗಳ್ಳತನ ಚರ್ಚೆ ಆಗ್ತಿದ್ದು, ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸ ಕುಗ್ಗಿದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ಗೆ ಆದ್ಯತೆ ನೀಡಿ . ಇವಿಎಂ ಬದಲು ಬ್ಯಾಲೆಟ್ ಪೇಪರ್ ಜಾರಿಗೆ ನಿಯಮಗಳನ್ನು ರೂಪಿಸಿ
ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಂಪುಟ ಒಪ್ಪಿದೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ. ಅದರಲ್ಲಿ 2025ರ ವರ್ಷಾಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನವೆಂಬರ್ ವೇಳೆಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.




