ಕಾನೂನು ಡಿಗ್ರಿ ತೋರಿಸಿ ಪಾಕಿಸ್ತಾನದ ಹೈಕೋರ್ಟ್​ನಲ್ಲಿ ನಕಲಿ ವ್ಯಕ್ತಿ 5 ವರ್ಷ ನ್ಯಾಯಾಧೀಶ !

ಇಸ್ಲಮಾಬಾದ್ : ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದ ಹಗರಣವೊಂದು ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ತನ್ನ ನ್ಯಾಯಾಧೀಶರಲ್ಲಿ ಒಬ್ಬರಾದ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನು ವಜಾಗೊಳಿಸುವ ಕುರಿತು ವಿವರವಾದ 116 ಪುಟಗಳ ತೀರ್ಪನ್ನು ನೀಡಿದೆ. ಪಾಕಿಸ್ತಾನದ (Pakistan) ನ್ಯಾಯಾಧೀಶರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ (IHC) 5 ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಅವರು ನಕಲಿ ಕಾನೂನು ಪದವಿ ಹೊಂದಿದ್ದಾರೆಂದು ಯಾರಿಗೂ ತಿಳಿಯದಂತೆ ತೀರ್ಪುಗಳನ್ನು ನೀಡಿದ್ದರು. ಅವರು ನಕಲಿ ಡಿಗ್ರಿ ಸರ್ಟಿಫಿಕೆಟ್ ಹೊಂದಿದ್ದಾರೆಂದು ಬಯಲಾಗಿದ್ದು ಹೇಗೆ ಗೊತ್ತಾ?

ನ್ಯಾಯಮೂರ್ತಿ ತಾರಿಕ್ ಮಹಮೂದ್ ಜಹಾಂಗಿರಿ 5 ವರ್ಷಗಳ ಕಾಲ ನ್ಯಾಯಮೂರ್ತಿಯಾಗಿದ್ದರೂ ಅವರು ಕಾನೂನು ಪದವಿಯನ್ನು ಹೊಂದಿರಲಿಲ್ಲ. ಆದ್ದರಿಂದ, ಹೈಕೋರ್ಟ್ ನ್ಯಾಯಾಧೀಶರಾಗಿ ಅವರ ನೇಮಕಾತಿ ಕಾನೂನುಬದ್ಧವಾಗಿ ಅಮಾನ್ಯವಾಗಿದೆ. ಇಸ್ಲಮಾಬಾದ್ ಹೈಕೋರ್ಟ್ ಫೆಬ್ರವರಿ 23ರ ಸೋಮವಾರದಂದು ವಿವರವಾದ 116 ಪುಟಗಳ ತೀರ್ಪನ್ನು ನೀಡಿತು. ಹೈಕೋರ್ಟ್ ನ್ಯಾಯಾಧೀಶರಲ್ಲಿ ಒಬ್ಬರಾದ ಅವರನ್ನು ಜಡ್ಜ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಜಹಾಂಗಿರಿ ಅವರನ್ನು ಡಿಸೆಂಬರ್ 2020ರಲ್ಲಿ ಹೈಕೋರ್ಟ್‌ಗೆ ನೇಮಿಸಲಾಗಿತ್ತು. ಅವರಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರಾಗಿ ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸುವುದನ್ನು ನಿಷೇಧಿಸಲಾಯಿತು.

ತಾರಿಕ್ ಮೆಹಮೂದ್ ಜಹಾಂಗಿರಿ ಮೊದಲು 1988ರಲ್ಲಿ . ನಕಲಿ ದಾಖಲಾತಿ ಸಂಖ್ಯೆಯ ಅಡಿಯಲ್ಲಿ ತಮ್ಮ ಎಲ್ಎಲ್.ಬಿ. ಭಾಗ-I ಪರೀಕ್ಷೆಗೆ ಹಾಜರಾಗಿದ್ದರುನಂತರ ಅವರು ಅನ್ಯಾಯದ ವಿಧಾನಗಳನ್ನು ಬಳಸಿ ಸಿಕ್ಕಿಬಿದ್ದರು ಮತ್ತು 1989ರಲ್ಲಿ ಹೊರಡಿಸಲಾದ ವಿಶ್ವವಿದ್ಯಾಲಯದ ಅನರ್ಹತೆಯ ಸುತ್ತೋಲೆಯ ಮೂಲಕ ಮೂರು ವರ್ಷಗಳ ಕಾಲ ನಿಷೇಧಿಸಲ್ಪಟ್ಟರು.

ಕರಾಚಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಒದಗಿಸಿದ ಮೂಲ ದಾಖಲೆಗಳನ್ನು ಆಧರಿಸಿ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ತಾರಿಕ್ ಮಹಮೂದ್ ಜಹಾಂಗಿರಿ ಅವರ ಶೈಕ್ಷಣಿಕ ದಾಖಲೆಗಳು ನಕಲಿ ಎಂದು ನ್ಯಾಯಾಲಯ ಹೇಳಿದೆ. ಜಹಾಂಗಿರಿ 1988ರಲ್ಲಿ ನಕಲಿ ದಾಖಲಾತಿ ಸಂಖ್ಯೆಯನ್ನು ಬಳಸಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಅವರು ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದು ಕಂಡುಬಂದಿತು. 1989ರಲ್ಲಿ ವಿಶ್ವವಿದ್ಯಾನಿಲಯವು ಅವರನ್ನು 3 ವರ್ಷಗಳ ಕಾಲ ನಿಷೇಧಿಸಿತ್ತು. ಅದಾದ ಮುಂದಿನ ವರ್ಷ, ಅವರು ಇಮ್ತಿಯಾಜ್ ಅಹ್ಮದ್ ಎಂಬ ಇನ್ನೊಬ್ಬ ವಿದ್ಯಾರ್ಥಿಗೆ ನಿಯೋಜಿಸಲಾದ ದಾಖಲಾತಿ ಸಂಖ್ಯೆಯನ್ನು ಬಳಸಿಕೊಂಡು ತಾರಿಕ್ ಜಹಾಂಗಿರಿ ಎಂಬ ಹೆಸರಿನಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು.
ತೀರ್ಪಿನಲ್ಲಿ, ಜಹಾಂಗಿರಿ ಅವರಿಗೆ ಮೂಲ ದಾಖಲೆಗಳನ್ನು ಮತ್ತು ಲಿಖಿತ ಉತ್ತರವನ್ನು ನೀಡಲು ಹಲವು ಅವಕಾಶಗಳನ್ನು ನೀಡಿದ್ದರೂ ಅವರು ದಾಖಲೆ ನೀಡಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

 

Related Posts

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!