ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್ ಗರ್ಗ್ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಸಿಂಗಪುರದ ಸ್ಥಳೀಯ ಪೊಲೀಸರ ವರದಿಯಂತೆ ಜುಬೀನ್ ಗರ್ಗ್ ಅವರನ್ನು ನದಿಯೊಂದರಿಂದ ಹೊರಗೆ ತೆಗೆಯಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಜುಬೀನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

 

ಅಸ್ಸಾಂ ಮೂಲದವರಾದ ಜುಬೀನ್ ಗರ್ಗ್ ಅವರು ಅಸ್ಸಾಮಿ ಸಿನಿಮಾಗಳ ಖ್ಯಾತ ನಟ ಆಗಿದ್ದರು. ಮಾತ್ರವಲ್ಲದೆ ಹಲವಾರು ಹಿಂದಿ, ಬೆಂಗಾಲಿ, ಅಸ್ಸಾಮಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಪಂಜಾಬಿ, ಒಡಿಯಾ, ಬೋಡೊ, ಕರ್ಬಿ, ತಿವಾ, ನೇಪಾಳಿ, ಭೋಜ್​​ಪುರಿ, ಭಿಷ್ಣುಪ್​ರಿಯ ಮಣಿಪುರಿ ಇನ್ನೂ ಕೆಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದರು. ಎಆರ್ ರೆಹಮಾನ್ ಸೇರಿದಂತೆ ಇನ್ನೂ ಕೆಲವು ಅತ್ಯುತ್ತಮ ಸಂಗೀತ ನಿರ್ದೇಶಕರುಗಳ ಮೆಚ್ಚಿನ ಗಾಯಕರಾಗಿದ್ದರು ಜುಬೀನ್ ಗರ್ಗ್.

ಕನ್ನಡದಲ್ಲಿ ಗಣೇಶ್ ನಟಿಸಿರುವ ‘ಹುಡುಗಾಟ’ ಸಿನಿಮಾದ ‘ಒಮ್ಮೊಮ್ಮೆ ಹೀಗೂ’, ‘ಮಹಾರುದ್ರ’ ಸಿನಿಮಾದ ‘ಅಮ್ಮಾ ನೀನು’, ‘ಪರಿಚಯ’ ಸಿನಿಮಾದ ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದಾರೆ. ಹಿಂದಿಯಲ್ಲಿ ‘ದಿಲ್ ಸೇ’ , ‘ಗ್ಯಾಂಗ್​​ಸ್ಟರ್’, ‘ಅಶೋಕಾ’, ‘ಕ್ರಿಶ್’,‘ಆನ್’, ಇನ್ನೂ ಹಲವಾರು ಜನಪ್ರಿಯ ಸಿನಿಮಾಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ‘ಗ್ಯಾಂಗ್​​ಸ್ಟರ್’ ಸಿನಿಮಾದ ‘ಯಾ ಆಲಿ’ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು, ‘ದಿಲ್ ಸೇ’ ಸಿನಿಮಾದ ‘ಪಾಕಿ ಪಾಕಿ ಪರದೇಸಿ’ ‘ಕಾಂಟೆ’ ಸಿನಿಮಾದ ‘ಮಾಹಿ ವೇ’ ಇನ್ನೂ ಹಲವಾರು ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದರು.

ಬಹುಮುಖ ಪ್ರತಿಭೆ ಹೊಂದಿದ್ದ ಜುಬೀನ್ ಗಾಯಕರಾಗಿ ಮಾತ್ರವೇ ಅಲ್ಲದೆ ಅಸ್ಸಾಮಿ ಭಾಷೆಯ ಹಲವಾರು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ಜೊತೆಗೆ ಸಂಗೀತ ನಿರ್ದೇಶನ, ಗೀತ ರಚನೆ, ಚಿತ್ರಕತೆ ರಚನೆ, ಸಿನಿಮಾ ನಿರ್ಮಾಣಗಳನ್ನು ಸಹ ಜುಬೀನ್ ಗರ್ಗ್ ಮಾಡಿದ್ದಾರೆ. ಇದೀಗ ಖ್ಯಾತ ಗಾಯಕನ ನಿಧನಕ್ಕೆ ಹಲವಾರು ಸಂಗೀತಗಾರರು, ಸಂಗೀತ ನಿರ್ದೇಶಕರುಗಳು ಕಂಬನಿ ಮಿಡಿದಿದ್ದಾರೆ. ಸಿನಿಮಾ ನಟರುಗಳು ಕಂಬನಿ ಮಿಡಿದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!