ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್ ಗರ್ಗ್ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಸಿಂಗಪುರದ ಸ್ಥಳೀಯ ಪೊಲೀಸರ ವರದಿಯಂತೆ ಜುಬೀನ್ ಗರ್ಗ್ ಅವರನ್ನು ನದಿಯೊಂದರಿಂದ ಹೊರಗೆ ತೆಗೆಯಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಜುಬೀನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

 

ಅಸ್ಸಾಂ ಮೂಲದವರಾದ ಜುಬೀನ್ ಗರ್ಗ್ ಅವರು ಅಸ್ಸಾಮಿ ಸಿನಿಮಾಗಳ ಖ್ಯಾತ ನಟ ಆಗಿದ್ದರು. ಮಾತ್ರವಲ್ಲದೆ ಹಲವಾರು ಹಿಂದಿ, ಬೆಂಗಾಲಿ, ಅಸ್ಸಾಮಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಪಂಜಾಬಿ, ಒಡಿಯಾ, ಬೋಡೊ, ಕರ್ಬಿ, ತಿವಾ, ನೇಪಾಳಿ, ಭೋಜ್​​ಪುರಿ, ಭಿಷ್ಣುಪ್​ರಿಯ ಮಣಿಪುರಿ ಇನ್ನೂ ಕೆಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದರು. ಎಆರ್ ರೆಹಮಾನ್ ಸೇರಿದಂತೆ ಇನ್ನೂ ಕೆಲವು ಅತ್ಯುತ್ತಮ ಸಂಗೀತ ನಿರ್ದೇಶಕರುಗಳ ಮೆಚ್ಚಿನ ಗಾಯಕರಾಗಿದ್ದರು ಜುಬೀನ್ ಗರ್ಗ್.

ಕನ್ನಡದಲ್ಲಿ ಗಣೇಶ್ ನಟಿಸಿರುವ ‘ಹುಡುಗಾಟ’ ಸಿನಿಮಾದ ‘ಒಮ್ಮೊಮ್ಮೆ ಹೀಗೂ’, ‘ಮಹಾರುದ್ರ’ ಸಿನಿಮಾದ ‘ಅಮ್ಮಾ ನೀನು’, ‘ಪರಿಚಯ’ ಸಿನಿಮಾದ ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದಾರೆ. ಹಿಂದಿಯಲ್ಲಿ ‘ದಿಲ್ ಸೇ’ , ‘ಗ್ಯಾಂಗ್​​ಸ್ಟರ್’, ‘ಅಶೋಕಾ’, ‘ಕ್ರಿಶ್’,‘ಆನ್’, ಇನ್ನೂ ಹಲವಾರು ಜನಪ್ರಿಯ ಸಿನಿಮಾಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ‘ಗ್ಯಾಂಗ್​​ಸ್ಟರ್’ ಸಿನಿಮಾದ ‘ಯಾ ಆಲಿ’ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು, ‘ದಿಲ್ ಸೇ’ ಸಿನಿಮಾದ ‘ಪಾಕಿ ಪಾಕಿ ಪರದೇಸಿ’ ‘ಕಾಂಟೆ’ ಸಿನಿಮಾದ ‘ಮಾಹಿ ವೇ’ ಇನ್ನೂ ಹಲವಾರು ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದರು.

ಬಹುಮುಖ ಪ್ರತಿಭೆ ಹೊಂದಿದ್ದ ಜುಬೀನ್ ಗಾಯಕರಾಗಿ ಮಾತ್ರವೇ ಅಲ್ಲದೆ ಅಸ್ಸಾಮಿ ಭಾಷೆಯ ಹಲವಾರು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ಜೊತೆಗೆ ಸಂಗೀತ ನಿರ್ದೇಶನ, ಗೀತ ರಚನೆ, ಚಿತ್ರಕತೆ ರಚನೆ, ಸಿನಿಮಾ ನಿರ್ಮಾಣಗಳನ್ನು ಸಹ ಜುಬೀನ್ ಗರ್ಗ್ ಮಾಡಿದ್ದಾರೆ. ಇದೀಗ ಖ್ಯಾತ ಗಾಯಕನ ನಿಧನಕ್ಕೆ ಹಲವಾರು ಸಂಗೀತಗಾರರು, ಸಂಗೀತ ನಿರ್ದೇಶಕರುಗಳು ಕಂಬನಿ ಮಿಡಿದಿದ್ದಾರೆ. ಸಿನಿಮಾ ನಟರುಗಳು ಕಂಬನಿ ಮಿಡಿದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!