ವೈಟ್ ಜೆರ್ಸಿಯಲ್ಲಿ ಫ್ಯಾನ್ಸ್ಗಳಿಂದ ‘ಕಿಂಗ್ ಕೊಹ್ಲಿ’ಗೆ ಗೌರವ.

ಕೆಲ ದಿನಗಳ ಹಿಂದೆ ಟೆಸ್ಟ್ ಕ್ರಿಕೆಟ್ಗೆ ಬೈ ಹೇಳಿದ ಕಿಂಗ್ ಕೊಹ್ಲಿಗೆ ಶನಿವಾರ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಗೌರವ ಕೊಡಲು ರೆಡಿಯಾಗಿದ್ದಾರೆ. ರನ್ ಮಿಷನ್ ಎಂದೇ ಖ್ಯಾತಿ ಪಡೆದಿದ್ದ ವಿರಾಟ್ ಕೊಹ್ಲಿ ರನ್ ಹಸಿವು ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದಾಗಲೇ ವೈಟ್ ಜೆರ್ಸಿ ಕ್ರಿಕೆಟ್ಗೆ ವಿದಾಯ ಹೇಳಿಬಿಟ್ಟಿದ್ದ ಕೊಹ್ಲಿಗೆ ಕೊನೆ ಪಕ್ಷ ಬಿಸಿಸಿಐ ವಿದಾಯದ ಪಂದ್ಯವಾಡಿಸಿ ಬೀಳ್ಕೊಡುಗೆ ನೀಡಬಹುದಿತ್ತು. ಆದ್ರೆ ಅದೂ ಆಗಲಿಲ್ಲ. ಹೀಗಾಗಿ ಆರ್ಸಿಬಿ ಫ್ಯಾನ್ಸ್ ನಾಳೆ ನಡೆಯುವ ಮ್ಯಾಚ್ಗೆ ನಂಬರ್ 18ರ ವೈಟ್ ಜೆರ್ಸಿ ಧರಿಸಿ ಕೊಹ್ಲಿಗೆ ಗೌರವ ನೀಡಲು ಸಿದ್ಧರಾಗಿದ್ದಾರೆ.

ಇಂಡಿಯಾ ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ಮಧ್ಯೆ ಕಿಂಗ್ ಕೊಹ್ಲಿಯ ಟೆಸ್ಟ್ ಕ್ರಿಕೆಟ್ನ ವಿದಾಯದ ಸುದ್ದಿ ಕೋಟ್ಯಂತರ ಅಭಿಮಾನಿಗಳಿಗೆ ಬರಸಿಡಿಲು ಬಂದಂತೆ ಎರಗಿತ್ತು. ಇನ್ನೂ ನಾಲ್ಕೈದು ವರ್ಷಗಳ ಕಾಲ ಕ್ರಿಕೆಟ್ ಆಡುವಷ್ಟು ಸಾಮರ್ಥ್ಯವಿದ್ದರೂ ವಿರಾಟ್ ದೃಢ ನಿರ್ಧಾರ ಮಾಡಿ ನಿವೃತ್ತಿ ಘೋಷಿಸಿದ್ದಾರೆ. 124 ಟೆಸ್ಟ್ ಮ್ಯಾಚ್ಗಳಲ್ಲಿ 9,230 ರನ್ ಹೊಡೆದಿದ್ದ ಕೊಹ್ಲಿಗೆ 770 ರನ್ ಗಳಿಸಿದರೆ 10000 ರನ್ಗಳ ಸರದಾರನಾಗುತ್ತಿದ್ದರು. ಆದರೆ ದಾಖಲೆಗೆ ತಲೆಕೆಡಿಸಕೊಳ್ಳದ ಕೊಹ್ಲಿ ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.ಬಿಸಿಸಿಐ ಆದರೂ ಒಂದು ಟೆಸ್ಟ್ ಮ್ಯಾಚ್ ಆಡುವಂತೆ ವಿನಂತಿ ಮಾಡಿ, ವಿದಾಯದ ಬೀಳ್ಕೊಡುಗೆ ಮಾಡಬಹುದಿತ್ತು ಅದನ್ನೂ ಮಾಡಲಿಲ್ಲ. ಇದೀಗ ಅಭಿಮಾನಿಗಳು, ಬಿಸಿಸಿಐ ಬೀಳ್ಕೊಡುಗೆ ಕೊಡಲಿಲ್ಲ ಅಂದರೆ ಏನಂತೆ ನಾವು ಕೊಡ್ತೀವಿ ಅಂತಾ ಸಜ್ಜಾಗಿದ್ದಾರೆ. ಭಾರತ ಪಾಕ್ ಸಂಘರ್ಷದಿಂದ ನಿಂತಿದ್ದ ಐಪಿಎಲ್ ಶನಿವಾರದಿಂದ ಮತ್ತೆ ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೋಲ್ಕತ್ತಾ ಮತ್ತು ಆರ್ಸಿಬಿ ನಡುವೆ ಮ್ಯಾಚ್ ನಡೆಯಲಿದೆ. ಆರ್ಸಿಬಿಯ ಪಂದ್ಯಕ್ಕೆ ರೆಡ್ ಜೆರ್ಸಿ ಧರಿಸಿ ಎಂಟ್ರಿ ಕೊಡ್ತಿದ್ದ ಫ್ಯಾನ್ಸ್ ನಾಳೆ ಕೊಹ್ಲಿಗಾಗಿ ನಂ. 18ರ ವೈಟ್ ಜೆರ್ಸಿ ಧರಿಸಿ ಸ್ಟೇಡಿಯಂಗೆ ಎಂಟ್ರಿ ಕೊಡಲಿದ್ದಾರೆ.

ಆ ಮೂಲಕ ಇಡೀ ಚಿನ್ನಸ್ವಾಮಿ ಸ್ಟೇಡಿಯಂನ 40,000 ಪ್ರೇಕ್ಷಕರು ವೈಟ್ ಅಂಡ್ ವೈಟ್ನಲ್ಲಿ ಕೊಹ್ಲಿಗೆ ಟೆಸ್ಟ್ ಕ್ರಿಕೆಟ್ನ ವಿದಾಯದ ಬೀಳ್ಕೊಡುಗೆ ನೀಡಲಿದ್ದಾರೆ. ದೇಶಕ್ಕಾಗಿ ರನ್ ಮಳೆಯನ್ನೇ ಹರಿಸಿ, ತನ್ನ ಅಗ್ರೆಶನ್ನಿಂದ ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದ ನಿಸ್ವಾರ್ಥ ಆಟಗಾರನಿಗೆ ಇದಕ್ಕಿಂತ ಇನ್ನೇನು ಬೇಕು ಹೇಳಿ. ಒಟ್ಟಿನಲ್ಲಿ ಇಡೀ ಸ್ಟೇಡಿಯಂನ ವೈಟ್ ಅಂಡ್ ವೈಟ್ನಲ್ಲಿ ನೋಡೋದು ನಿಜಕ್ಕೂ ಅಚ್ಚರಿಯೇ ಸರಿ. ಇದು ಕಿಂಗ್ ಕೊಹ್ಲಿ ಗಳಿಸಿದ ಆಗಾಧ ಸಂಪತ್ತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!