ವೈಟ್ ಜೆರ್ಸಿಯಲ್ಲಿ ಫ್ಯಾನ್ಸ್ಗಳಿಂದ ‘ಕಿಂಗ್ ಕೊಹ್ಲಿ’ಗೆ ಗೌರವ.

ಕೆಲ ದಿನಗಳ ಹಿಂದೆ ಟೆಸ್ಟ್ ಕ್ರಿಕೆಟ್ಗೆ ಬೈ ಹೇಳಿದ ಕಿಂಗ್ ಕೊಹ್ಲಿಗೆ ಶನಿವಾರ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಗೌರವ ಕೊಡಲು ರೆಡಿಯಾಗಿದ್ದಾರೆ. ರನ್ ಮಿಷನ್ ಎಂದೇ ಖ್ಯಾತಿ ಪಡೆದಿದ್ದ ವಿರಾಟ್ ಕೊಹ್ಲಿ ರನ್ ಹಸಿವು ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದಾಗಲೇ ವೈಟ್ ಜೆರ್ಸಿ ಕ್ರಿಕೆಟ್ಗೆ ವಿದಾಯ ಹೇಳಿಬಿಟ್ಟಿದ್ದ ಕೊಹ್ಲಿಗೆ ಕೊನೆ ಪಕ್ಷ ಬಿಸಿಸಿಐ ವಿದಾಯದ ಪಂದ್ಯವಾಡಿಸಿ ಬೀಳ್ಕೊಡುಗೆ ನೀಡಬಹುದಿತ್ತು. ಆದ್ರೆ ಅದೂ ಆಗಲಿಲ್ಲ. ಹೀಗಾಗಿ ಆರ್ಸಿಬಿ ಫ್ಯಾನ್ಸ್ ನಾಳೆ ನಡೆಯುವ ಮ್ಯಾಚ್ಗೆ ನಂಬರ್ 18ರ ವೈಟ್ ಜೆರ್ಸಿ ಧರಿಸಿ ಕೊಹ್ಲಿಗೆ ಗೌರವ ನೀಡಲು ಸಿದ್ಧರಾಗಿದ್ದಾರೆ.

ಇಂಡಿಯಾ ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ಮಧ್ಯೆ ಕಿಂಗ್ ಕೊಹ್ಲಿಯ ಟೆಸ್ಟ್ ಕ್ರಿಕೆಟ್ನ ವಿದಾಯದ ಸುದ್ದಿ ಕೋಟ್ಯಂತರ ಅಭಿಮಾನಿಗಳಿಗೆ ಬರಸಿಡಿಲು ಬಂದಂತೆ ಎರಗಿತ್ತು. ಇನ್ನೂ ನಾಲ್ಕೈದು ವರ್ಷಗಳ ಕಾಲ ಕ್ರಿಕೆಟ್ ಆಡುವಷ್ಟು ಸಾಮರ್ಥ್ಯವಿದ್ದರೂ ವಿರಾಟ್ ದೃಢ ನಿರ್ಧಾರ ಮಾಡಿ ನಿವೃತ್ತಿ ಘೋಷಿಸಿದ್ದಾರೆ. 124 ಟೆಸ್ಟ್ ಮ್ಯಾಚ್ಗಳಲ್ಲಿ 9,230 ರನ್ ಹೊಡೆದಿದ್ದ ಕೊಹ್ಲಿಗೆ 770 ರನ್ ಗಳಿಸಿದರೆ 10000 ರನ್ಗಳ ಸರದಾರನಾಗುತ್ತಿದ್ದರು. ಆದರೆ ದಾಖಲೆಗೆ ತಲೆಕೆಡಿಸಕೊಳ್ಳದ ಕೊಹ್ಲಿ ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.ಬಿಸಿಸಿಐ ಆದರೂ ಒಂದು ಟೆಸ್ಟ್ ಮ್ಯಾಚ್ ಆಡುವಂತೆ ವಿನಂತಿ ಮಾಡಿ, ವಿದಾಯದ ಬೀಳ್ಕೊಡುಗೆ ಮಾಡಬಹುದಿತ್ತು ಅದನ್ನೂ ಮಾಡಲಿಲ್ಲ. ಇದೀಗ ಅಭಿಮಾನಿಗಳು, ಬಿಸಿಸಿಐ ಬೀಳ್ಕೊಡುಗೆ ಕೊಡಲಿಲ್ಲ ಅಂದರೆ ಏನಂತೆ ನಾವು ಕೊಡ್ತೀವಿ ಅಂತಾ ಸಜ್ಜಾಗಿದ್ದಾರೆ. ಭಾರತ ಪಾಕ್ ಸಂಘರ್ಷದಿಂದ ನಿಂತಿದ್ದ ಐಪಿಎಲ್ ಶನಿವಾರದಿಂದ ಮತ್ತೆ ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೋಲ್ಕತ್ತಾ ಮತ್ತು ಆರ್ಸಿಬಿ ನಡುವೆ ಮ್ಯಾಚ್ ನಡೆಯಲಿದೆ. ಆರ್ಸಿಬಿಯ ಪಂದ್ಯಕ್ಕೆ ರೆಡ್ ಜೆರ್ಸಿ ಧರಿಸಿ ಎಂಟ್ರಿ ಕೊಡ್ತಿದ್ದ ಫ್ಯಾನ್ಸ್ ನಾಳೆ ಕೊಹ್ಲಿಗಾಗಿ ನಂ. 18ರ ವೈಟ್ ಜೆರ್ಸಿ ಧರಿಸಿ ಸ್ಟೇಡಿಯಂಗೆ ಎಂಟ್ರಿ ಕೊಡಲಿದ್ದಾರೆ.

ಆ ಮೂಲಕ ಇಡೀ ಚಿನ್ನಸ್ವಾಮಿ ಸ್ಟೇಡಿಯಂನ 40,000 ಪ್ರೇಕ್ಷಕರು ವೈಟ್ ಅಂಡ್ ವೈಟ್ನಲ್ಲಿ ಕೊಹ್ಲಿಗೆ ಟೆಸ್ಟ್ ಕ್ರಿಕೆಟ್ನ ವಿದಾಯದ ಬೀಳ್ಕೊಡುಗೆ ನೀಡಲಿದ್ದಾರೆ. ದೇಶಕ್ಕಾಗಿ ರನ್ ಮಳೆಯನ್ನೇ ಹರಿಸಿ, ತನ್ನ ಅಗ್ರೆಶನ್ನಿಂದ ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದ ನಿಸ್ವಾರ್ಥ ಆಟಗಾರನಿಗೆ ಇದಕ್ಕಿಂತ ಇನ್ನೇನು ಬೇಕು ಹೇಳಿ. ಒಟ್ಟಿನಲ್ಲಿ ಇಡೀ ಸ್ಟೇಡಿಯಂನ ವೈಟ್ ಅಂಡ್ ವೈಟ್ನಲ್ಲಿ ನೋಡೋದು ನಿಜಕ್ಕೂ ಅಚ್ಚರಿಯೇ ಸರಿ. ಇದು ಕಿಂಗ್ ಕೊಹ್ಲಿ ಗಳಿಸಿದ ಆಗಾಧ ಸಂಪತ್ತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು