ವೈಟ್ ಜೆರ್ಸಿಯಲ್ಲಿ ಫ್ಯಾನ್ಸ್ಗಳಿಂದ ‘ಕಿಂಗ್ ಕೊಹ್ಲಿ’ಗೆ ಗೌರವ.

ಕೆಲ ದಿನಗಳ ಹಿಂದೆ ಟೆಸ್ಟ್ ಕ್ರಿಕೆಟ್ಗೆ ಬೈ ಹೇಳಿದ ಕಿಂಗ್ ಕೊಹ್ಲಿಗೆ ಶನಿವಾರ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಗೌರವ ಕೊಡಲು ರೆಡಿಯಾಗಿದ್ದಾರೆ. ರನ್ ಮಿಷನ್ ಎಂದೇ ಖ್ಯಾತಿ ಪಡೆದಿದ್ದ ವಿರಾಟ್ ಕೊಹ್ಲಿ ರನ್ ಹಸಿವು ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದಾಗಲೇ ವೈಟ್ ಜೆರ್ಸಿ ಕ್ರಿಕೆಟ್ಗೆ ವಿದಾಯ ಹೇಳಿಬಿಟ್ಟಿದ್ದ ಕೊಹ್ಲಿಗೆ ಕೊನೆ ಪಕ್ಷ ಬಿಸಿಸಿಐ ವಿದಾಯದ ಪಂದ್ಯವಾಡಿಸಿ ಬೀಳ್ಕೊಡುಗೆ ನೀಡಬಹುದಿತ್ತು. ಆದ್ರೆ ಅದೂ ಆಗಲಿಲ್ಲ. ಹೀಗಾಗಿ ಆರ್ಸಿಬಿ ಫ್ಯಾನ್ಸ್ ನಾಳೆ ನಡೆಯುವ ಮ್ಯಾಚ್ಗೆ ನಂಬರ್ 18ರ ವೈಟ್ ಜೆರ್ಸಿ ಧರಿಸಿ ಕೊಹ್ಲಿಗೆ ಗೌರವ ನೀಡಲು ಸಿದ್ಧರಾಗಿದ್ದಾರೆ.

ಇಂಡಿಯಾ ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ಮಧ್ಯೆ ಕಿಂಗ್ ಕೊಹ್ಲಿಯ ಟೆಸ್ಟ್ ಕ್ರಿಕೆಟ್ನ ವಿದಾಯದ ಸುದ್ದಿ ಕೋಟ್ಯಂತರ ಅಭಿಮಾನಿಗಳಿಗೆ ಬರಸಿಡಿಲು ಬಂದಂತೆ ಎರಗಿತ್ತು. ಇನ್ನೂ ನಾಲ್ಕೈದು ವರ್ಷಗಳ ಕಾಲ ಕ್ರಿಕೆಟ್ ಆಡುವಷ್ಟು ಸಾಮರ್ಥ್ಯವಿದ್ದರೂ ವಿರಾಟ್ ದೃಢ ನಿರ್ಧಾರ ಮಾಡಿ ನಿವೃತ್ತಿ ಘೋಷಿಸಿದ್ದಾರೆ. 124 ಟೆಸ್ಟ್ ಮ್ಯಾಚ್ಗಳಲ್ಲಿ 9,230 ರನ್ ಹೊಡೆದಿದ್ದ ಕೊಹ್ಲಿಗೆ 770 ರನ್ ಗಳಿಸಿದರೆ 10000 ರನ್ಗಳ ಸರದಾರನಾಗುತ್ತಿದ್ದರು. ಆದರೆ ದಾಖಲೆಗೆ ತಲೆಕೆಡಿಸಕೊಳ್ಳದ ಕೊಹ್ಲಿ ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.ಬಿಸಿಸಿಐ ಆದರೂ ಒಂದು ಟೆಸ್ಟ್ ಮ್ಯಾಚ್ ಆಡುವಂತೆ ವಿನಂತಿ ಮಾಡಿ, ವಿದಾಯದ ಬೀಳ್ಕೊಡುಗೆ ಮಾಡಬಹುದಿತ್ತು ಅದನ್ನೂ ಮಾಡಲಿಲ್ಲ. ಇದೀಗ ಅಭಿಮಾನಿಗಳು, ಬಿಸಿಸಿಐ ಬೀಳ್ಕೊಡುಗೆ ಕೊಡಲಿಲ್ಲ ಅಂದರೆ ಏನಂತೆ ನಾವು ಕೊಡ್ತೀವಿ ಅಂತಾ ಸಜ್ಜಾಗಿದ್ದಾರೆ. ಭಾರತ ಪಾಕ್ ಸಂಘರ್ಷದಿಂದ ನಿಂತಿದ್ದ ಐಪಿಎಲ್ ಶನಿವಾರದಿಂದ ಮತ್ತೆ ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೋಲ್ಕತ್ತಾ ಮತ್ತು ಆರ್ಸಿಬಿ ನಡುವೆ ಮ್ಯಾಚ್ ನಡೆಯಲಿದೆ. ಆರ್ಸಿಬಿಯ ಪಂದ್ಯಕ್ಕೆ ರೆಡ್ ಜೆರ್ಸಿ ಧರಿಸಿ ಎಂಟ್ರಿ ಕೊಡ್ತಿದ್ದ ಫ್ಯಾನ್ಸ್ ನಾಳೆ ಕೊಹ್ಲಿಗಾಗಿ ನಂ. 18ರ ವೈಟ್ ಜೆರ್ಸಿ ಧರಿಸಿ ಸ್ಟೇಡಿಯಂಗೆ ಎಂಟ್ರಿ ಕೊಡಲಿದ್ದಾರೆ.

ಆ ಮೂಲಕ ಇಡೀ ಚಿನ್ನಸ್ವಾಮಿ ಸ್ಟೇಡಿಯಂನ 40,000 ಪ್ರೇಕ್ಷಕರು ವೈಟ್ ಅಂಡ್ ವೈಟ್ನಲ್ಲಿ ಕೊಹ್ಲಿಗೆ ಟೆಸ್ಟ್ ಕ್ರಿಕೆಟ್ನ ವಿದಾಯದ ಬೀಳ್ಕೊಡುಗೆ ನೀಡಲಿದ್ದಾರೆ. ದೇಶಕ್ಕಾಗಿ ರನ್ ಮಳೆಯನ್ನೇ ಹರಿಸಿ, ತನ್ನ ಅಗ್ರೆಶನ್ನಿಂದ ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದ ನಿಸ್ವಾರ್ಥ ಆಟಗಾರನಿಗೆ ಇದಕ್ಕಿಂತ ಇನ್ನೇನು ಬೇಕು ಹೇಳಿ. ಒಟ್ಟಿನಲ್ಲಿ ಇಡೀ ಸ್ಟೇಡಿಯಂನ ವೈಟ್ ಅಂಡ್ ವೈಟ್ನಲ್ಲಿ ನೋಡೋದು ನಿಜಕ್ಕೂ ಅಚ್ಚರಿಯೇ ಸರಿ. ಇದು ಕಿಂಗ್ ಕೊಹ್ಲಿ ಗಳಿಸಿದ ಆಗಾಧ ಸಂಪತ್ತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!