ಎಂ.ಎಸ್ ಧೋನಿ ಹೇಳಿಕೆಗೆ ಫ್ಯಾನ್ಸ್ ಶಾಕ್ ! ಇನ್ಮುಂದೆ IPL ಆಡುತ್ತೇನೆ ಎಂದು ಭಾವಿಸಬೇಡಿ.. ​

ಧೋನಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕನಾಗಿದ್ದರು. ಆದ್ರೆ ಕ್ಯಾಪ್ಟನ್ಸಿಯಲ್ಲಿ ಧೋನಿ ಫೇಲ್ ಆದರು. ಇದರ ಬೆನ್ನಲ್ಲೇ ಅವರ ಐಪಿಎಲ್ ನಿವೃತ್ತಿ ಬಗ್ಗೆ ಮತ್ತಷ್ಟು ವದಂತಿಗಳು ಕೇಳಿ ಬಂದಿದ್ದವು. ಇದೀಗ ಈ ಬಗ್ಗೆ ಎಂ.ಎಸ್ ಧೋನಿ ಪ್ರತಿಕ್ರಿಯಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​)ನಲ್ಲಿ ಧೋನಿ ಆಡುತ್ತಾರೋ, ಇಲ್ವೋ ಎನ್ನುವುದು ಕಳೆದ ಎರಡ್ಮೂರು ಸೀಸನ್​ನಿಂದ ದೊಡ್ಡ ಚರ್ಚೆ ನಡೆಯುತ್ತಿದೆ.
ಎಂ.ಎಸ್ ಧೋನಿ ಅವರು ಮುಂದಿನ ಐಪಿಎಲ್ ಸೀಸನ್​ನಲ್ಲಿ ಮುಂದುವರೆಯುತ್ತಾರೋ, ಇಲ್ಲವೋ ಎನ್ನುವುದನ್ನು ಫ್ರಾಂಚೈಸಿ ಕೂಡ ಈ ಬಗ್ಗೆ ಸ್ಪಷ್ಟಪಡಿಸಿಲ್ಲ. ಧೋನಿ ಅವರು ಅಧಿಕೃತವಾಗಿ ಎಲ್ಲಿಯು ಹೇಳಿಲ್ಲ. ಇದನ್ನು ಈಗಲೂ ರಹಸ್ಯವಾಗಿ ಇಡಲಾಗಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಎಂ.ಎಸ್ ಧೋನಿ ಅವರು ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿರುವ ಎಂ.ಎಸ್ ಧೋನಿ, ಐಪಿಎಲ್ ನಿವೃತ್ತಿ ಘೋಷಣೆ ಮಾಡುವುದಕ್ಕೆ ನನಗೆ ಸಾಕಷ್ಟು ಸಮಯ ಇದೆ. ನೀವು ಯೆಲ್ಲೋ ಕಲರ್ ಜೆರ್ಸಿಯಲ್ಲೇ ಇನ್ನಷ್ಟು ಕಾಲ ಉಳಿಯಬೇಕು ಎನ್ನುವುದು ಅಭಿಮಾನಿಗಳ ಆಸೆ ಆಗಿದ್ರೇ ಅದೇ ಜೆರ್ಸಿಯಲ್ಲೇ ಇರುತ್ತೇನೆ. ಆದರೆ ಆಡುತ್ತೇನೋ, ಇಲ್ಲವೋ ಎನ್ನುವುದು ಬೇರೆ ವಿಷಯ ಎಂದು ಧೋನಿ ಹೇಳಿದ್ದಾರೆ.

ನಾನು ಯಾವಾಗಲೂ ಚೆನ್ನೈ ತಂಡದ ಜೊತೆ ಇರುತ್ತೇನೆ. ಅಭಿಮಾನಿಗಳಿಂದ ಹರ್ಷೋದ್ಗಾರಗಳು ಇನ್ನು 15, 20 ವರ್ಷಗಳ ಕಾಲ ಬಂದರೂ ನಾನು ಅಷ್ಟು ವರ್ಷ ಆಡುವುದಿಲ್ಲ. ಇದು ಅಭಿಮಾನಿಗಳಿಗು ಗೊತ್ತು ಎಂದು ಪ್ರಶ್ನೆವೊಂದಕ್ಕೆ ಎಂ.ಎಸ್ ಧೋನಿ ಅವರು ಉತ್ತರ ನೀಡಿದ್ದಾರೆ. ಸದ್ಯ ಚೆನ್ನೈ ತಂಡದ ನಾಯಕನಾಗಿ ಈಗಲೂ ಧೋನಿ ಅವರೇ ಇದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!