ಪೊಲೀಸರ ಲಾಠಿ ಚಾರ್ಜ್​​ ಗೆ ಪ್ರತಿಯಾಗಿ ರೈತರಿಂದ ಪೊಲೀಸರ ವಾಹನಗಳ ಮೇಲೆ ಕಲ್ಲೇಟು.

ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್​ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಅತ್ತ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್​ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್​​ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ.

ಒಂದೆಡೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಕಬ್ಬು ಕಾರ್ಖಾನೆ ಮಾಲೀಕರ ನಡೆ ನಡೆಸಿದ್ದರೆ ಇತ್ತ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದು ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ಹೋಗಿದ್ದು, ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಆ ವೇಳೆ ಪೊಲೀಸರು ಲಾಠಿ ಚಾರ್ಜ್​ ಮೂಲಕ ರೈತರನ್ನು ಚದುರಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಪೊಲಿಸ್ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಕ್ಷಣ ಕ್ಷಣಕ್ಕೂ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!