ಆ.15 ರಿಂದ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಆರಂಭ: ಸುಗಮ ಸಂಚಾರಕ್ಕೆ ಇದು ಸಹಕಾರಿ!

ನವದೆಹಲಿ: ಕೇಂದ್ರ ಸರ್ಕಾರವು ಆಗಸ್ಟ್ 15 ರಿಂದ ಸುಗಮ ಹಾಗೂ ಸರಾಗವಾದ ಹೆದ್ದಾರಿ ಪ್ರಯಾಣಕ್ಕೆ 3,000 ರೂ ಮೌಲ್ಯದ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪರಿಚಯಿಸಲು ಸಿದ್ಧವಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದ್ದಾರೆ.
X ಹ್ಯಾಂಡಲ್ ಪೋಸ್ಟ್ ವೊಂದನ್ನು ಮಾಡಿರುವ ಅವರು, ಪಾಸ್ ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್ಗಳವರೆಗೆ ಯಾವುದು ಮೊದಲು ಬರುತ್ತದೆಯೋ ಅದು ಮಾನ್ಯವಾಗಿರುವಂತೆ ಪಾಸ್ ರೂಪಿಸಲಾಗಿದೆ ಎಂದು ಗಡ್ಕರಿ ಅವರು ಹೇಳಿದ್ದಾರೆ. ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಮಾತ್ರ ಈ ಪಾಸ್ ವಿನ್ಯಾಸಗೊಳಿಸಲಾಗಿದೆ ಎಂದು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಈ ಹೊಸ ಆ್ಯಪ್ ಎಲ್ಲಿ ಲಭ್ಯ?

 

 

 

 

 

ಸಕ್ರಿಯಗೊಳಿಸುವಿಕೆ ಮತ್ತು ನವೀಕರಣಕ್ಕಾಗಿ ಮೀಸಲಾದ ಲಿಂಕ್ ಶೀಘ್ರದಲ್ಲೇ ರಾಜ್ಮಾರ್ಗ್ ಯಾತ್ರಾ ಅಪ್ಲಿಕೇಶನ್ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್ಸೈಟ್ಗಳಲ್ಲಿ ಲಭ್ಯವಿರುತ್ತದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.  60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಕಳವಳಗಳನ್ನು ಈ ನೀತಿ ಪರಿಹರಿಸುತ್ತದೆ ಮತ್ತು ಒಂದೇ ಕೈಗೆಟುಕುವ ವಹಿವಾಟಿನ ಮೂಲಕ ಟೋಲ್ ಪಾವತಿಗಳನ್ನು ಸರಳಗೊಳಿಸುತ್ತದೆ ಎಂದು ಕೇಂದ್ರದ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವರು ಸ್ಪಷ್ಟಪಡಿಸಿದ್ದಾರೆ.
“ಕಾಯುವ ಸಮಯ ಹಾಗೂ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ವಿವಾದಗಳನ್ನು ಕಡಿಮೆ ಮಾಡುವ ಮೂಲಕ, ವಾರ್ಷಿಕ ಪಾಸ್ ಲಕ್ಷಾಂತರ ಖಾಸಗಿ ವಾಹನ ಮಾಲೀಕರಿಗೆ ವೇಗವಾದ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಸಚಿವರು ಹೇಳಿದ್ದಾರೆ.

ಈ ಪಾಸ್ ನಿಂದ ಆಗುವ ಲಾಭವೇನು?  ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತುಸರಾಗ ಹಾಗೂ ಕಡಿಮೆ ವೆಚ್ಚದ ಪರಿಣಾಮಕಾರಿ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!