ಲಾಕ್ ಅಪ್ ಡೆತ್ ಆದ ತಂದೆ-ಮಗ ತಮಿಳ್ಳಾಡಲ್ಲಿ 9 ಪೊಲೀಸರಿಗೆ ಮರಣದಂಡನೆ!

ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದ ರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲೆಯ ನ್ಯಾಯಾಲಯ ಆದೇಶ ಪ್ರಕಟಿಸಿದೆ.

2020ರ ಜೂನ್ 19ರಂದು, ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿದ್ದಾರೆ ಎಂಬ ಆರೋಪದ ಮೇಲೆ, ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯ ರಾಜ್ ಮತ್ತು ಅವರ ಮಗ ಬೆನಿಕ್ಸ್ ಅವರನ್ನು ಬಂಧಿಸಲಾಗಿತ್ತು ನಂತರ ಈ ಆರೋಪ ಸುಳ್ಳು ಎಂದು ಹೇಳಲಾಗಿತ್ತು. ಆದರೆ, ತೂತುಕೂಡಿ ಜಿಲ್ಲೆಯ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಮಗ ಜೆ ಬೆನಿಕ್ಸ ಅವರು ಕಸ್ಟಡಿಯಲ್ಲಿ ಮೃತಪಟ್ಟಿದ್ದರು.

ಆರು ವರ್ಷಗಳ ಹಿಂದೆ ನಡೆದಿದ್ದ ಈ ಘಟನೆಗೆ ದೇಶ ವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು. ಈ ಪ್ರಕರಣವನ್ನು ನ್ಯಾಯಾಲಯ, ಅಧಿಕಾರದ ದುರುಪಯೋಗದ ಸ್ಪಷ್ಟ ಉದಾಹರಣೆ ಎಂದು ಹೇಳಿದೆ. ತಮಿಳುನಾಡಿನಲ್ಲಿ ಅನೇಕ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಇದ್ದಾರೆ. ಈ ತೀರ್ಪು ಪೊಲೀಸರಲ್ಲಿ ಭಯ ಹುಟ್ಟಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ತಂದೆ ಮತ್ತು ಮಗನನ್ನು ಬಟ್ಟೆ ಬಿಚ್ಚಿಸಿ ಕ್ರೂರವಾಗಿ ಹಲ್ಲೆ ಮಾಡ ಲಾಗಿತ್ತು. ಅದನ್ನು ಓದಿದರೆ ಹೃದಯ ನಡುಗು ತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2020ರ ಜೂನ್ 19ರಂದು ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಸತಂಕುಳಂ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಕೆಲವೇ ದಿನಗಳಲ್ಲಿ ಇಬ್ಬರೂ ಮೃತಪಟ್ಟರು. ಬಂಧಿತರ ಸಂಬಂಧಿಕರು, ಪೊಲೀಸ್ ಠಾಣೆಯಲ್ಲಿ ಇಡೀ ರಾತ್ರಿ ಹಲ್ಲೆ ನಡೆಸಲಾಗಿದೆ. ಎಂದು ಆರೋಪಿಸಿ, ಗುದದ್ವಾರದಿಂದ ರಕ್ತಸ್ರಾವ ಸಂಭವಿಸಿದ್ದೂ ಸೇರಿದಂತೆ ಗಂಭೀರ ದೈಹಿಕ ಹಿಂಸೆಯ ಗುರುತುಗಳನ್ನು ಉಲ್ಲೇಖಿಸಿದ್ದರು.

ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ, ರಾಜ್ಯದ ಸಿಬಿ-ಸಿಐಡಿಯಿಂದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಶಕ್ಕೆ ಪಡೆದು, ಈ ಪ್ರಕರಣದಲ್ಲಿ 10 ಮಂದಿ ಪೊಲೀಸರನ್ನು ಬಂಧಿಸಿತು. ಬಂಧಿತರಲ್ಲಿ ಒಬ್ಬ ಇನ್ಸ್‌ಪೆಕ್ಟರ್, ಇಬ್ಬರು ಉಪನಿರೀಕ್ಷಕರು ಹಾಗೂ ಹಲ ವಾರು ಕಾನ್ಸ್‌ಟೇಬಲ್‌ಗಳು ಸೇರಿದ್ದರು. ಅದ ರಲ್ಲಿ ಒಬ್ಬರು ವಿಚಾರಣೆ ವೇಳೆ ಅಸುನೀಗಿದ್ದರು. ನಂತರ ಸಿಬಿಐ ಆರೋಪಿಗಳ ವಿರುದ್ಧ ಕೊಲೆ ಆರೋಪಗಳನ್ನು ದಾಖಲಿಸಿತು.

ತನಿಖೆಯ ವೇಳೆ ಮಹಿಳಾ ಕಾನ್ಸ್‌ಟೇಬಲ್
ಒಬ್ಬರ ಹೇಳಿಕೆ ಪ್ರಮುಖ ತಿರುವು ತಂದು ಕೊಟ್ಟಿತು. ಅವರು, ತಂದೆ-ಮಗನ ಮೇಲೆ ಇಡೀ ರಾತ್ರಿ ಹಲ್ಲೆ ನಡೆದಿದ್ದು, ಠಾಣೆಯ ಮೇಜುಗಳು ಮತ್ತು ಲಾಠಿಗಳ ಮೇಲೆ ರಕ್ತದ ಕಲೆಗಳು ಕಂಡುಬಂದಿದ್ದವು ಎಂದು ತನಿಖಾಧಿಕಾರಿಗಳಿಗೆ ಹೇಳಿದ ರೆಂದು ವರದಿಯಾಗಿದೆ. ಸತಂಕುಳಂ ಪೊಲೀಸ್‌ ಠಾಣೆಯ ಸಿಸಿಟಿವಿ ದೃಶ್ಯಗಳು ಪ್ರತಿದಿನ ಸ್ವಯಂ ಚಾಲಿತವಾಗಿ ಅಳಿಸಿ ಹೋಗುವಂತೆ ವ್ಯವಸ್ಥೆ ಮಾಡಲಾಗಿದ್ದ ರಿಂದ, ಅವುಗಳನ್ನು ಸಂರಕ್ಷಿ ಸದೇ ಇದ್ದದ್ದು ತನಿಖೆಗೆ ದೊಡ್ಡ ಸವಾಲಾ ಯಿತು. ಐದು ವರ್ಷಕ್ಕಿಂತ ಹೆಚ್ಚು ಕಾಲ ನಡೆದ ವಿಚಾರಣೆಯಲ್ಲಿ 100 ಕ್ಕೂ ಹೆಚ್ಚು ಸಾಕ್ಷಿದಾರರನ್ನು ಪರೀಕ್ಷಿಸಲಾಯಿತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!