ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು !

 

ಜಮೀನಿನ ಬೇಲಿಯಿಂದ ವಿದ್ಯುತ್ ಪ್ರವಹಿಸಿ 5 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಇದೇ ಹುಲಿ ಮೂರು ಹಸುಗಳನ್ನು ಕೊಂದಿತ್ತು. ಜಾನುವಾರು ಸತ್ತಾಗ ಸ್ಪಂದಿಸದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂದು ತಿಂದಿದ್ದ 5 ವರ್ಷದ ಹೆಣ್ಣು ಹುಲಿ ವಿದ್ಯುತ್ ಶಾಕ್​​ಗೆ ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಓಡೋಡಿ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಕೂಡ ಬಿಡಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್ ಹಾಕಿದ ಅನ್ನದಾತರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಜಮೀನು ಒಂದಕ್ಕೆ ನೀಡಿದ್ದ ವಿದ್ಯುತ್ ಸಂಪರ್ಕದಿಂದ 5 ವರ್ಷ ಪ್ರಾಯದ ಹೆಣ್ಣು ಹುಲಿ ಸಾವನ್ನಪ್ಪಿದೆ. ಈ ಹಿನ್ನಲೆ ಸ್ಥಳಕ್ಕೆ ಬಂದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಗೆ ಘೇರಾವ್ ಹಾಕಿ ಅನ್ನದಾತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇನ್ನು ಕಳೆದ 15 ದಿನಗಳಲ್ಲಿ ರವಿಚಂದ್ರ ಎಂಬುವವರ ಜಮೀನಿನಲ್ಲಿ ಮೇಯುತ್ತಿದ್ದ ಮೂರು ಜಾನುವಾರುಗಳ ಮೇಲೆ ವ್ಯಾಘ್ರ ದಾಳಿ ಮಾಡಿತ್ತು. ಮೂರು ಹಸುವನ್ನ ಕೊಂದು ತಿಂದು ತೇಗಿತ್ತು. ಆಗ ಬಂಡೀಪುರ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಾರದೆ ಉಡಾಫೆ ತೋರಿದ್ದರು. ಆದರೆ ಇಂದು ಹುಲಿ ಸತ್ತ ವಿಚಾರ ತಿಳಿದ ತಕ್ಷಣ ಇಡೀ ಬಂಡೀಪುರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಇದರಿಂದ ರೊಚ್ಚಿಗೆದ್ದ ರೈತ ವರ್ಗ ಅರಣ್ಯ ಸಿಬ್ಬಂದಿಗೆ ಘೇರಾವ್ ಹಾಕಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.ಹುಲಿಯ ಕಾಟಕ್ಕೆ ಈ ಭಾಗದ ರೈತರು ರೋಸಿಹೋಗಿದ್ದಾರೆ. ಆಗಲೇ ಅರಣ್ಯ ಸಿಬ್ಬಂದಿ ಬೋನಿಟ್ಟು ಹುಲಿಯನ್ನ ಹಿಡಿದಿದ್ದರೆ ಇಂದು ಹುಲಿ ಬಲಿಯಾಗುತ್ತಿರಲಿಲ್ಲ ಎಂದು ರೈತ ದಿನೇಶ್​ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 

ಜಮೀನಿನಲ್ಲಿ ವಿದ್ಯುತ್ ಕೊಟ್ಟು ಹುಲಿ ಸಾವಿಗೆ ಕಾರಣವಾದವರ ಮೇಲೆ ಎಫ್​ಐಆರ್ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಿ, ಆದರೆ ಕರ್ತವ್ಯ ಲೋಪ ಎಸಗಿದ ಅರಣ್ಯ ಇಲಾಖೆಯ ಸಿಎಫ್ ಪ್ರಭಾಕರನ್ ಮೇಲೆ ಎಫ್ ಐ ಆರ್ ಮಾಡಿದರೆ ಮಾತ್ರ ರೈತನ ಮೇಲೆ ಎಫ್​ಐಆರ್ ಮಾಡಬೇಕು. ಇಲ್ಲದೆ ಹೋದರೆ ಯಾವುದೇ ಕಾರಣಕ್ಕೂ ಪ್ರಕರಣ ದಾಖಲು ಮಾಡುವುದಕ್ಕೆ ಬಿಡಲ್ಲವೆಂದು ರೈತರು ಪಟ್ಟುಹಿಡಿದರು. ರೈತರ ಉಗ್ರ ರೂಪಕ್ಕೆ ಬೆದರಿದ ಬಂಡೀಪುರ ಸಿಎಫ್ ಪ್ರಭಾಕರನ್, ಪೊಲೀಸ್ ರಕ್ಷಣೆ ಜೊತೆ ಸ್ಥಳಕ್ಕೆ ಬಂದಿದ್ದು ಹಾಸ್ಯಸ್ಪದವಾಗಿತ್ತು.

 

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!