ಪೊಲೀಸ್ ಠಾಣೆಯ ಕರ್ತವ್ಯನಿರತ ಇಬ್ಬರು ಸಿಬ್ಬಂದಿ ನಡುವೆ ಗಲಾಟೆ : ಹೆಡ್‌ಕಾನ್‌ಸ್ಟೇಬಲ್​ ವಿರುದ್ಧ FIR.

ಉಪ್ಪಾರಪೇಟೆ ಪೊಲೀಸ್ ಠಾಣೆಯ ಕರ್ತವ್ಯನಿರತ ಇಬ್ಬರು ಸಿಬ್ಬಂದಿ ನಡುವೆ ಗಲಾಟೆ ನಡೆದಿದ್ದು, ಅದೇ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾನ್ಸ್ಟೇಬಲ್ ರೇಣುಕಾ ಅವರು ನೀಡಿದ ದೂರಿನ ಮೇರೆಗೆ ಹೆಡ್ ಕಾನ್ಸ್ಟೇಬಲ್ ಬಿ.ಜಿ. ಗೋವಿಂದರಾಜು ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

“ಜೂನ್ 10ರಂದು ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಮನೆ ಬಿಟ್ಟು ಬಂದಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ನೋಡಿಕೊಳ್ಳುವಂತೆ, ಊಟ ನೀಡುವಂತೆ ಠಾಣೆಯ ಎಎಸ್ಐ ತಿಮ್ಮೇಗೌಡ ಸೂಚಿಸಿದ್ದರು”.

“ತಡರಾತ್ರಿ 2.30ರ ಸುಮಾರಿಗೆ ಆ ಮಕ್ಕಳನ್ನು ತನಿಖಾ ಸಹಾಯಕರ ಕೊಠಡಿಗೆ ಕರೆದೊಯ್ದು ಊಟ ಮಾಡಿಸುತ್ತಿದ್ದೆ. ಅದೇ ಸಮಯದಲ್ಲಿ ಪ್ರವೇಶ ದ್ವಾರದ ರಿಸಪ್ಶನ್ ಟೇಬಲ್ ಮೇಲೆ ಕುಳಿತಿದ್ದ ಹೆಡ್ಕಾನ್ಸ್ಟೇಬಲ್ ಬಿ.ಜಿ. ಗೋವಿಂದರಾಜು, ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಮಾತನಾಡುತ್ತಿದ್ದರು. ಅದನ್ನು ಕೇಳಿಸಿಕೊಂಡ ಹೆಣ್ಣು ಮಕ್ಕಳು, ನನಗೆ ಮಾಹಿತಿ ನೀಡಿದ್ದರು”.

“ಆಗ ಯಾಕೆ ಸರ್ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಮಾತನಾಡುತ್ತಿದ್ದೀರಿ? ಇಲ್ಲಿ ಚಿಕ್ಕ ಮಕ್ಕಳು ಇದ್ದಾರೆ ಎಂದು ಪ್ರಶ್ನಿಸಿದ್ದೆ. ಆಗ ಗೋವಿಂದರಾಜು, ನನಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಶೂ ಧರಿಸಿದ್ದ ಕಾಲಿನಿಂದ 3-4 ಬಾರಿ ಒದ್ದಿದ್ದಾರೆ. ಆಗ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ತಿಮ್ಮೇಗೌಡ, ಕಾನ್ಸ್ಟೇಬಲ್ಗಳಾದ ಬಸಪ್ಪ, ಮಹೇಶ್ ಅವರು ಬಿಡಿಸಲು ಬಂದಿದ್ದರು. ಆಗಲೂ ನಿಂದಿಸಿ ಒದ್ದಿದ್ದಾರೆ” ಎಂದು ರೇಣುಕಾ ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!